Featured

ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ : ಡೊನಾಲ್ಡ್ ಟ್ರಂಪ್ -Vishwanews24

ವಾಷಿಂಗ್ಟನ್: ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ. ಆದರೆ ಈ ಕಾರ್ಯ ಕೇವಲ ಕಣ್ಣೊರೆಸುವ ತಂತ್ರಗಾರಿಕೆಯಾಗಬಾರದು. ಪಾಕಿಸ್ತಾನದೊಂದಿಗೆ ಹಳಿಸಿರುವ ಬಾಂಧವ್ಯವನ್ನು ಸರಿಪಡಿಸಿಕೊಳ್ಳಲು ಅಮೆರಿಕ ಸಿದ್ಧವಿದೆ. ಆದರೆ ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರರರನ್ನು ಮೊದಲು ಮಟ್ಟ ಹಾಕಬೇಕು. ಈ ಕುರಿತ ಪ್ರಾಮಾಣಿಕ ಪ್ರಯತ್ನವಾದರೆ ಮಾತ್ರ ಪಾಕಿಸ್ತಾನಕ್ಕೆ ಅಮೆರಿಕದ ಬೆಂಬಲ ವಿರಲಿದೆ ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ ಭಾರತ ಸರ್ಕಾರ ನೀಡಿದ್ದ ಡಾಸಿಯರ್ ಹೊರತಾಗಿಯೂ ಯಾವುದೇ ಕ್ರಮ ಕೈಗೊಳ್ಳದ ಪಾಕಿಸ್ತಾನ, ಇದೀಗ ಇಮ್ರಾನ್ ಖಾನ್ ಅವರ ಅಮೆರಿಕ ಪ್ರವಾಸ ಹತ್ತಿರವಾಗುತ್ತಲೇ ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದೆ. ಆ ಮೂಲಕ ಪರೋಕ್ಷವಾಗಿ ಪರೋಕ್ಷವಾಗಿ ಅಮೆರಿಕವನ್ನು ಸಂತೈಸುವ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ ಪಾಕಿಸ್ತಾನ ಸರ್ಕಾರಕ್ಕೆ ಅಮೆರಿಕ ನೀಡುತ್ತಿದ್ದ, ರಕ್ಷಣಾ ಪರಿಹಾರ ಧನ ಕೂಡ ಸ್ಥಗಿತವಾಗಿದ್ದು, ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದೇ ಕಾರಣಕ್ಕೆ ಪಾಕಿಸ್ತಾನ ಉಗ್ರ ಹಫೀಜ್ ಸಯ್ಯೀದ್ ಬಂಧನದ ಮೂಲಕ ವಿಶ್ವ ಸಮುದಾಯವನ್ನು ಸಂತೈಸುವ ಕೆಲಸಕ್ಕೆ ಮುಂದಾಗಿದೆ.

ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ಅಮೆರಿಕ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉಗ್ರನ ಬಂಧನವನ್ನು ಕಣ್ಣೊರೆಸುವ ತಂತ್ರಗಾರಿಕೆ ಎಂದು ಕಿಡಿಕಾರಿದೆ.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago