Featured

ಪಾಕಿಸ್ತಾನ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಕೇಸರಿ ಪುತ್ರ..

 

ಪಾಕಿಸ್ತಾನದ ಈ ಬಾರಿಯ ಸಾರ್ವತ್ರಿಕ ಚುನಾವಣೆ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಬಾರಿ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಗೆ ಹಿಂದೂ ನಾಯಕರೊಬ್ಬರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ನಾಯಕ ಮಹೇಶ್ ಕುಮಾರ್ ಮಲಾನಿ ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಪಾಕಿಸ್ತಾನದಲ್ಲಿ ಸುರಕ್ಷತೆ ಇಲ್ಲ ಎಂಬ ನೋವಿನ ಮಧ್ಯೆಯೇ, ಹಿಂದೂ ನಾಯಕನೋರ್ವ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಗೆ ಆಯ್ಕೆಯಾಗಿರುವುದು ಪರಿಸ್ಥಿತಿ ಬದಲಾವಣೆಯ ಆಶಾಭಾವ ಮೂಡಿಸಿದೆ.

ದಕ್ಷಿಣ ಸಿಂಧ್ ಪ್ರಾಂತ್ಯದ ತಾರಪಾರಾಕರ್ ಕ್ಷೇತ್ರದಿಂದ ಮಹೇಶ್ ಕುಮಾರ್ ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮಹೇಶ್ ತಮ್ಮ ಪ್ರತಿಸ್ಪರ್ಧಿ ಅರಬ್ ಜಕುಲ್ಲಾ ಅವರನ್ನು ಸೋಲಿಸಿದ್ದಾರೆ. ರಾಜಸ್ಥಾನಿ ಬ್ರಾಹ್ಮಣ ಕುಟುಂಬಕ್ಕೆ ಸೇರಿದ ಮಹೇಶ್, 2003 ರಿಂದ 2008ರ ವರೆಗೆ ಪಿಪಿಪಿ ನಾಮನಿರ್ದೇಶಕ ಸಂಸದರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ತರ್ಪಾಕಾರ್ ಕ್ಷೇತ್ರದಿಂದ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಹೇಶ್ ಕುಮಾರ್ ಮಲಾನಿಯವರು ಭರ್ಜರಿ ಗೆಲುವನ್ನು ದಾಖಲಿಸಿ ಪಾಕಿಸ್ತಾನದ ಮೊದಲ ಹಿಂದೂ ಸಂಸದ ಎಂಬ ಗೌರವಕ್ಕೆ ಕೂಡಾ ಪಾತ್ರರಾಗಿದ್ದಾರೆ. ಮಹೇಶ್ ಕುಮಾರ್ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಗ್ರಾಂಡ್ ಡೆಮಾಕ್ರಾಟಿಕ್ ಅಲಯನ್ಸ್ ಪಕ್ಷದ ಅರಬ್ ಜಕಾವುಲ್ಲಾ ಎಂಬುವವರನ್ನು ಬರೋಬ್ಬರಿ 21,922 ಮತಗಳಿಂದ ಸೋಲಿಸಿ ಗಮನ ಸೆಳೆದಿದ್ದಾರೆ. ಈ ಚುನಾವಣೆಯಲ್ಲಿ ಮಹೇಶ್ ಕುಮಾರ್ ಮಲಾನಿ ಅವರು 37,245 ಮತಗಳನ್ನು ಹಾಗೂ ಅವರ ಹತ್ತಿರದ ಪ್ರತಿಸ್ಪರ್ಧಿ ಜಕಾವುಲ್ಲಾ ಅವರು 18,323 ಮತಗಳನ್ನು ಪಡೆದಿದ್ದರು. ಮಹೇಶ್ ಅವರ ಜಯಭೇರಿ ಪಾಕಿಸ್ತಾನದಲ್ಲಿ ಹೊಸ ಅವಕಾಶದ ಬಾಗಿಲೊಂದನ್ನು ತೆರೆದಿದ್ದು, ಅಲ್ಪಸಂಖ್ಯಾತ ಹಿಂದೂ ಸಮುದಾಯ ಪಾಕಿಸ್ತಾನದಲ್ಲಿ ಇನ್ನು ಮುಂದೆ ನಿರ್ಭಯವಾಗಿ ಉಸಿರಾಡಬಹುದು ಎಂಬ ಆಶಾಭಾವ ಮೂಡಿದೆ.

 

2009ರಲ್ಲಿ ತನ್ನ ತಂದೆ ಮರಣಾ ನಂತರ ಹಿರಿಯ ಮಗನಾದ ರಾಣಾ ಹಮೀರ್ ಸಿಂಗ್ ಸೋಧಾರಿಗೆಗೆ ಪಟ್ಟಾಭಿಷೇಕವನ್ನು ಮಾಡಿದಾಗ ಭಾರೀ ಸಂಖ್ಯೆಯ ಹಿಂದೂಗಳು ಮತ್ತು ಮುಸ್ಲಿಮರು ಪಾಲ್ಗೊಂಡಿದ್ದರು… ಇಂಡೋ ಪಾಕಿಸ್ತಾನದ ಗಡಿಯಲ್ಲಿ ಇವರಿಗೆ ಪಟ್ಟಾಭಿಭಿಷೇಕವನ್ನು ಮಾಡಲಾಯಿತು… ಹಮೀರ್ ಸಿಂಗ್ ರಾಜ ವೈಭೋಗದಂತೆ ಕಿರೀಟ ಧಾರಣೆಯನ್ನುಕೂಡಾ ಮಾಡಲಾಯಿತು.. ಇದಕ್ಕೆ ಇಡೀ ಪಾಕ್ ಸಾಕ್ಷಿಯಾಗಿತ್ತು. ಭಾರತಕ್ಕೆ ಏನಾದರೂ ತೊಂದರೆ ಯಾಗುವಂತೆ ಮಾಡಿದರೆ ಈ ಕುಟುಂಬ ಪಾಕ್‍ನಲ್ಲಿ ಇದ್ದೇವೆ ಎಂದು ಎಂದಿಗೂ ಪಾಕ್‍ಗೆ ಬೆಂಬಲಿಸದೆ ಅವರನ್ನು ದ್ವೇಷಿಸುತ್ತನೇ ಬಂದಿದ್ದಾರೆ.. ಈ ಕುಟುಂಬ ಎಂದಿಗೂ ಭಾರತೀಯರನ್ನು ಬಿಟ್ಟುಕೊಟ್ಟಿಲ್ಲ… ಇದೀಗ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಮತ್ತೆ ಹಿಂದೂ ಪುತ್ರನೇ ಜಯಗಳಿಸುವ ಮೂಲಕ ಪಾಕಿಸ್ತಾನದ ಮುಸ್ಲಿಮರ ಸೊಕ್ಕು ಮುರಿಯಲು ತಯಾರಾಗಿ ನಿಂತಿದ್ದಾರೆ..

ಈಗಾಗಲೇ ಪಾಕ್‍ನಲ್ಲಿ ಹಿಂದೂ ರಾಣಾ ಹಮೀರ್ ಸಿಂಗ್‍ರವರನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳಬಹುದು.. ಪಾಕ್‍ನಲ್ಲಿ ಜೀವಿಸುತ್ತಿದ್ದರೂ ಅವರ ರಾಣಾ ಹಮೀರ್ ಸಿಂಗ್ ತಲೆಗೆ ಕೇಸರಿ ಬಣ್ಣದ ಶಾಲನ್ನು ಸುತ್ತಿ ಹಣೆಗೆ ಕುಂಕುಮವನ್ನು ಹಾಕಿ ರಾಜ ರೋಷವಾಗಿ ಪಾಕ್‍ನಲ್ಲಿ ಜೀವಿಸುತ್ತಿದ್ದಾರೆ.. ರಾಣಾ ಹಮೀರ್ ಸಿಂಗ್ ಸಿಂಧ್ ಅನ್ನು ಪಾಕಿಸ್ತಾನದ “ಧತ” ಎಂದು ಸಹ ಕರೆಯಲಾಗುತ್ತದೆ.. ಇವರು ಭಾರತದ ಪ್ರಸಿದ್ಧ ರಜಪೂತ ವಂಶವನ್ನು ಇನ್ನೂ ಉಳಿಸಿಕೊಂಡು ಬಂದಿರುವುದು ನಿಜಕ್ಕೂ ಆಶ್ಚರ್ಯಕರವಾಗಿದೆ..

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago