Featured

ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧ ತೆರವು -Vishwanews24

ಇಸ್ಲಾಮಾಬಾದ್‌: ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ನಾಗರಿಕ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧವನ್ನು ಮಂಗಳವಾರ ತೆಗೆದು ಹಾಕಿದೆ.

ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಭಾರತಕ್ಕೆ ನಿರ್ಬಂಧಿಸಲಾಗಿದ್ದ ಪಾಕಿಸ್ತಾನ ವೈಮಾನಿಕ ವಲಯ ಬಳಕೆಯನ್ನು ಮತ್ತೆ ಪುನಾರಂಭ ಮಾಡಿದೆ. ಈ ಹಿಂದೆ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನದ ಮೇಲೆ ಭಾರತ ಇನ್ನಷ್ಟು ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ಆತಂಕದಿಂದಾಗಿ ಪಾಕಿಸ್ತಾನ ಸರ್ಕಾರವು ತನ್ನ ಏರೋಸ್ಪೇಸ್ ಬಳಕೆಯನ್ನು ಭಾರತಕ್ಕೆ ನಿರ್ಬಂಧಿಸಿತ್ತು. ಪುಲ್ವಾಮಾ ದಾಳಿ ಬಳಿಕ ಫೆಬ್ರುವರಿ 26ರಂದು ಭಾರತೀಯ ವಾಯುಪಡೆ ವಿಮಾನಗಳು, ಬಾಲಕೋಟ್‌ ಪ್ರದೇಶದಲ್ಲಿ ಜೈಶ್‌ ಎ ಮೊಹಮ್ಮದ್‌(ಜೆಇಎಂ)ಭಯೋತ್ಪಾದಕರ ಸಂಘಟನೆ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಸಂಪೂರ್ಣ ತಡೆಯೊಡ್ಡಿತ್ತು.

ಇದರಿಂದ ಪಾಕಿಸ್ತಾನ ಹಾಗೂ ಇತರೆ ದೇಶಗಳ ನಾಗರಿಕ ವಿಮಾನಯಾನ ಹಾರಾಟ ಕೂಡ ಪಾಕಿಸ್ತಾನದ ಏರೋಸ್ಪೇಸ್ ನಲ್ಲಿ ರದ್ದಾಗಿತ್ತು. ಹೀಗಾಗಿ ಪಾಕಿಸ್ತಾನ ತನ್ನ ವಾಯುಗಡಿ ತೆರೆಯುವಂತೆ ಅಂತಾರಾಷ್ಟ್ರೀಯ ಸಮುದಾಯದಿಂದ ವ್ಯಾಪಕ ಒತ್ತಡ ಕೇಳಿ ಬಂದಿತ್ತು. ಭಾರತೀಯ ವಾಯು ಸೇನೆಯ ವಾಯುದಾಳಿ ನಡೆದ ನಾಲ್ಕು ತಿಂಗಳ ಬಳಿಕ ಇದೀಗ ಪಾಕಿಸ್ತಾನ ಕೊನೆಗೂ ನಾಗರಿಕ ವಿಮಾನ ಸೇವೆಗೆ ತನ್ನ ವಾಯುಗಡಿಯನ್ನು ತೆರೆದಿದೆ.

ವಿದೇಶಿ ವಿಮಾನಗಳು ಮಾತ್ರವಲ್ಲದೇ ಭಾರತೀಯ ವಿಮಾನಗಳು ಕೂಡ ಈಗ ಪಾಕಿಸ್ತಾನದ ಏರೋಸ್ಪೇಸ್‌’ನಲ್ಲಿ ಹಾರಾಡಬಹುದಾಗಿದೆ. ಕಳೆದ ತಿಂಗಳು ಕಿರ್ಗಿಸ್ತಾನದಲ್ಲಿ ನಡೆದ ಶಾಂಘೈ ಸರ್ಕಾರ ಒಕ್ಕೂಟ ಸಭೆಯಲ್ಲಿ ಭಾಗವಹಿಸಲು ಮೋದಿ ತೆರಳುವಾಗ ಪಾಕಿಸ್ತಾನ ಬದಲಿಗೆ ಬೇರೆ ಮಾರ್ಗವನ್ನು ಬಳಸಿದ್ದರು.

ಭಾರತ ಮನವಿ ಸಲ್ಲಿಸಿದರೆ ಪ್ರಧಾನಿ ಮೋದಿ ವಿಮಾನ ಹಾರಾಟಕ್ಕೆ ಅವಕಾಶ ಮಾಡಿಕೊಡುವುದಾಗಿ ಪಾಕಿಸ್ತಾನ ಹೇಳಿತ್ತು. ಆದರೆ ಭಾರತ ಯಾವುದೇ ಮನವಿ ಸಲ್ಲಿಸಿರಲಿಲ್ಲ. ಇದೇ ರೀತಿ ಭಾರತವು ಪಾಕಿಸ್ತಾನದ ವೈಮಾನಿಕ ಹಾರಾಟದ ಮೇಲೆ ಹೇರಿದ್ದ ನಿರ್ಬಂಧವನ್ನು ಮೇ 31ರಂದು ತೆರವುಗೊಳಿಸಿತ್ತು. ಈ ನಿರ್ಬಂಧದಿಂದ ಭಾರತಕ್ಕೆ ಜುಲೈ 2ರವರೆಗೆ 491 ಕೋಟಿ ರೂ ನಷ್ಟ ಉಂಟಾಗಿತ್ತು. ಸ್ಪೈಸ್ ಜೆಟ್, ಇಂಡಿಗೋ, ಗೋ ಏರ್‌ ಗೆ 30.73 ಕೋಟಿ , 25.1 ಕೋಟಿ, 2.1ಕೋಟಿ ರೂ ನಷ್ಟವಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಮಂಗಳವಾರ ಬೆಳಗ್ಗೆ 12.41ರಿಂದ ತನ್ನ ವಾಯುಪ್ರದೇಶದ ಮೂಲಕ ಎಲ್ಲಾ ರೀತಿಯ ನಾಗರಿಕ ವಿಮಾನಗಳ ಹಾರಾಟ ನಡೆಸಬಹುದು ಎಂದು ಪಾಕಿಸ್ತಾನ ವಿಮಾನಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗರಿಕ ವಿಮಾನಗಳ ಹಾರಾಟಕ್ಕೆ ವಾಯುಪ್ರದೇಶ ನಿರ್ಬಂಧ ತೆರವು ಮಾಡುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಕೇಳಿಕೊಂಡಿತ್ತು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago