Featured

ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧ ತೆರವು -Vishwanews24

ಇಸ್ಲಾಮಾಬಾದ್‌: ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ನಾಗರಿಕ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧವನ್ನು ಮಂಗಳವಾರ ತೆಗೆದು ಹಾಕಿದೆ.

ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಭಾರತಕ್ಕೆ ನಿರ್ಬಂಧಿಸಲಾಗಿದ್ದ ಪಾಕಿಸ್ತಾನ ವೈಮಾನಿಕ ವಲಯ ಬಳಕೆಯನ್ನು ಮತ್ತೆ ಪುನಾರಂಭ ಮಾಡಿದೆ. ಈ ಹಿಂದೆ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನದ ಮೇಲೆ ಭಾರತ ಇನ್ನಷ್ಟು ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ಆತಂಕದಿಂದಾಗಿ ಪಾಕಿಸ್ತಾನ ಸರ್ಕಾರವು ತನ್ನ ಏರೋಸ್ಪೇಸ್ ಬಳಕೆಯನ್ನು ಭಾರತಕ್ಕೆ ನಿರ್ಬಂಧಿಸಿತ್ತು. ಪುಲ್ವಾಮಾ ದಾಳಿ ಬಳಿಕ ಫೆಬ್ರುವರಿ 26ರಂದು ಭಾರತೀಯ ವಾಯುಪಡೆ ವಿಮಾನಗಳು, ಬಾಲಕೋಟ್‌ ಪ್ರದೇಶದಲ್ಲಿ ಜೈಶ್‌ ಎ ಮೊಹಮ್ಮದ್‌(ಜೆಇಎಂ)ಭಯೋತ್ಪಾದಕರ ಸಂಘಟನೆ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಸಂಪೂರ್ಣ ತಡೆಯೊಡ್ಡಿತ್ತು.

ಇದರಿಂದ ಪಾಕಿಸ್ತಾನ ಹಾಗೂ ಇತರೆ ದೇಶಗಳ ನಾಗರಿಕ ವಿಮಾನಯಾನ ಹಾರಾಟ ಕೂಡ ಪಾಕಿಸ್ತಾನದ ಏರೋಸ್ಪೇಸ್ ನಲ್ಲಿ ರದ್ದಾಗಿತ್ತು. ಹೀಗಾಗಿ ಪಾಕಿಸ್ತಾನ ತನ್ನ ವಾಯುಗಡಿ ತೆರೆಯುವಂತೆ ಅಂತಾರಾಷ್ಟ್ರೀಯ ಸಮುದಾಯದಿಂದ ವ್ಯಾಪಕ ಒತ್ತಡ ಕೇಳಿ ಬಂದಿತ್ತು. ಭಾರತೀಯ ವಾಯು ಸೇನೆಯ ವಾಯುದಾಳಿ ನಡೆದ ನಾಲ್ಕು ತಿಂಗಳ ಬಳಿಕ ಇದೀಗ ಪಾಕಿಸ್ತಾನ ಕೊನೆಗೂ ನಾಗರಿಕ ವಿಮಾನ ಸೇವೆಗೆ ತನ್ನ ವಾಯುಗಡಿಯನ್ನು ತೆರೆದಿದೆ.

ವಿದೇಶಿ ವಿಮಾನಗಳು ಮಾತ್ರವಲ್ಲದೇ ಭಾರತೀಯ ವಿಮಾನಗಳು ಕೂಡ ಈಗ ಪಾಕಿಸ್ತಾನದ ಏರೋಸ್ಪೇಸ್‌’ನಲ್ಲಿ ಹಾರಾಡಬಹುದಾಗಿದೆ. ಕಳೆದ ತಿಂಗಳು ಕಿರ್ಗಿಸ್ತಾನದಲ್ಲಿ ನಡೆದ ಶಾಂಘೈ ಸರ್ಕಾರ ಒಕ್ಕೂಟ ಸಭೆಯಲ್ಲಿ ಭಾಗವಹಿಸಲು ಮೋದಿ ತೆರಳುವಾಗ ಪಾಕಿಸ್ತಾನ ಬದಲಿಗೆ ಬೇರೆ ಮಾರ್ಗವನ್ನು ಬಳಸಿದ್ದರು.

ಭಾರತ ಮನವಿ ಸಲ್ಲಿಸಿದರೆ ಪ್ರಧಾನಿ ಮೋದಿ ವಿಮಾನ ಹಾರಾಟಕ್ಕೆ ಅವಕಾಶ ಮಾಡಿಕೊಡುವುದಾಗಿ ಪಾಕಿಸ್ತಾನ ಹೇಳಿತ್ತು. ಆದರೆ ಭಾರತ ಯಾವುದೇ ಮನವಿ ಸಲ್ಲಿಸಿರಲಿಲ್ಲ. ಇದೇ ರೀತಿ ಭಾರತವು ಪಾಕಿಸ್ತಾನದ ವೈಮಾನಿಕ ಹಾರಾಟದ ಮೇಲೆ ಹೇರಿದ್ದ ನಿರ್ಬಂಧವನ್ನು ಮೇ 31ರಂದು ತೆರವುಗೊಳಿಸಿತ್ತು. ಈ ನಿರ್ಬಂಧದಿಂದ ಭಾರತಕ್ಕೆ ಜುಲೈ 2ರವರೆಗೆ 491 ಕೋಟಿ ರೂ ನಷ್ಟ ಉಂಟಾಗಿತ್ತು. ಸ್ಪೈಸ್ ಜೆಟ್, ಇಂಡಿಗೋ, ಗೋ ಏರ್‌ ಗೆ 30.73 ಕೋಟಿ , 25.1 ಕೋಟಿ, 2.1ಕೋಟಿ ರೂ ನಷ್ಟವಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಮಂಗಳವಾರ ಬೆಳಗ್ಗೆ 12.41ರಿಂದ ತನ್ನ ವಾಯುಪ್ರದೇಶದ ಮೂಲಕ ಎಲ್ಲಾ ರೀತಿಯ ನಾಗರಿಕ ವಿಮಾನಗಳ ಹಾರಾಟ ನಡೆಸಬಹುದು ಎಂದು ಪಾಕಿಸ್ತಾನ ವಿಮಾನಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗರಿಕ ವಿಮಾನಗಳ ಹಾರಾಟಕ್ಕೆ ವಾಯುಪ್ರದೇಶ ನಿರ್ಬಂಧ ತೆರವು ಮಾಡುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಕೇಳಿಕೊಂಡಿತ್ತು.

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

13 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

13 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

13 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

13 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

13 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

15 hours ago