ಬೆಳಗಾವಿ: ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಡಿನ ದಾಳಿಯಲ್ಲಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ಯೋಧ ರಾಹುಲ್ ಭೈರು ಸುಳಗೇಕರ (25) ಹುತಾತ್ಮರಾಗಿದ್ದಾರೆ.
ಪಾಕ್ ಪಡೆಗಳು ಗುರುವಾರ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ನಲ್ಲಿ ಅಪ್ರಚೋದಿತ ದಾಳಿ ಆರಂಭಿಸಿದ್ದವು. ಪಾಕ್ ಪುಂಡಾಟಕ್ಕೆ ಭಾರತದ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲಾರಂಭಿಸಿದವು. ಈ ವೇಳೆ ರಾಹುಲ್ ಸುಳಗೇಕರ ಗುಂಡು ತಗುಲಿ ವೀರಮರಣ ಹೊಂದಿದ್ದಾರೆ.
ಸಣ್ಣ ವಯಸ್ಸಿನಲ್ಲೇ ಸೇನೆ ಸೇರಿ ದೇಶ ಸೇವೆಯ ಕನಸು ಕಂಡಿದ್ದ ಸುಳಗೇಕರ, 4 ವರ್ಷಗಳ ಹಿಂದೆಯೇ ಸೇನೆಗೆ ಸೇರ್ಪಡೆಯಾಗಿದ್ದರು. ಗಣೇಶ ಉತ್ಸವ ವೇಳೆ ರಜೆ ಪಡೆದು ತವರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಕರ್ತವ್ಯಕ್ಕೆ ಮರಳಿದ್ದರು.
ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ ದೇಶಾಭಿಮಾನ ಮೆರೆದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…