ಬೆಳಗಾವಿ: ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಡಿನ ದಾಳಿಯಲ್ಲಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ಯೋಧ ರಾಹುಲ್ ಭೈರು ಸುಳಗೇಕರ (25) ಹುತಾತ್ಮರಾಗಿದ್ದಾರೆ.
ಪಾಕ್ ಪಡೆಗಳು ಗುರುವಾರ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ನಲ್ಲಿ ಅಪ್ರಚೋದಿತ ದಾಳಿ ಆರಂಭಿಸಿದ್ದವು. ಪಾಕ್ ಪುಂಡಾಟಕ್ಕೆ ಭಾರತದ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲಾರಂಭಿಸಿದವು. ಈ ವೇಳೆ ರಾಹುಲ್ ಸುಳಗೇಕರ ಗುಂಡು ತಗುಲಿ ವೀರಮರಣ ಹೊಂದಿದ್ದಾರೆ.
ಸಣ್ಣ ವಯಸ್ಸಿನಲ್ಲೇ ಸೇನೆ ಸೇರಿ ದೇಶ ಸೇವೆಯ ಕನಸು ಕಂಡಿದ್ದ ಸುಳಗೇಕರ, 4 ವರ್ಷಗಳ ಹಿಂದೆಯೇ ಸೇನೆಗೆ ಸೇರ್ಪಡೆಯಾಗಿದ್ದರು. ಗಣೇಶ ಉತ್ಸವ ವೇಳೆ ರಜೆ ಪಡೆದು ತವರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಕರ್ತವ್ಯಕ್ಕೆ ಮರಳಿದ್ದರು.
ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ ದೇಶಾಭಿಮಾನ ಮೆರೆದಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…