ಬೆಳಗಾವಿ: ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಡಿನ ದಾಳಿಯಲ್ಲಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ಯೋಧ ರಾಹುಲ್ ಭೈರು ಸುಳಗೇಕರ (25) ಹುತಾತ್ಮರಾಗಿದ್ದಾರೆ.
ಪಾಕ್ ಪಡೆಗಳು ಗುರುವಾರ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ನಲ್ಲಿ ಅಪ್ರಚೋದಿತ ದಾಳಿ ಆರಂಭಿಸಿದ್ದವು. ಪಾಕ್ ಪುಂಡಾಟಕ್ಕೆ ಭಾರತದ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲಾರಂಭಿಸಿದವು. ಈ ವೇಳೆ ರಾಹುಲ್ ಸುಳಗೇಕರ ಗುಂಡು ತಗುಲಿ ವೀರಮರಣ ಹೊಂದಿದ್ದಾರೆ.
ಸಣ್ಣ ವಯಸ್ಸಿನಲ್ಲೇ ಸೇನೆ ಸೇರಿ ದೇಶ ಸೇವೆಯ ಕನಸು ಕಂಡಿದ್ದ ಸುಳಗೇಕರ, 4 ವರ್ಷಗಳ ಹಿಂದೆಯೇ ಸೇನೆಗೆ ಸೇರ್ಪಡೆಯಾಗಿದ್ದರು. ಗಣೇಶ ಉತ್ಸವ ವೇಳೆ ರಜೆ ಪಡೆದು ತವರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಕರ್ತವ್ಯಕ್ಕೆ ಮರಳಿದ್ದರು.
ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ ದೇಶಾಭಿಮಾನ ಮೆರೆದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…