ನವದೆಹಲಿ : ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಠಾಣ್ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್ಪತನ್ನಲ್ಲಿ ಪಾಕ್ ನುಸುಳುಕೋರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಭಾಗದಲ್ಲಿ ನಿಯೋಜನೆಗೊಂಡಿದ್ದ ಬಿಎಸ್ಎಫ್ ಸಿಬ್ಬಂದಿ ನುಸುಳುಕೋರನ ಚಲನವಲನಗಳನ್ನು ಗಮನಿಸಿ ಅನುಮಾನಗೊಂಡಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಬಿಎಸ್ಎಫ್ ಪಡೆ ನುಸುಳುಕೋರನಿಗೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಪಾಕ್ ನುಸುಳುಕೋರ ಗಡಿ ದಾಟಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಿಎಸ್ಎಫ್ ಸಿಬ್ಬಂದಿ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.
ಪಾಕ್ ನುಸುಳುಕೋರನ ಒಳನುಸುಳುವಿಕೆಗೆ ಕಾರಣ ಮತ್ತು ಅವನ ಗುರುತು ಪತ್ತೆ ಮಾಡುವ ಬಗ್ಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…