ಬ್ರುಸೆಲ್: ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕುವುದು ಮತ್ತು ಅಂತಹ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಕಾಶ್ಮೀರದ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬರೆದ ಅಭಿಪ್ರಾಯದ ಬಗ್ಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.ದಕ್ಷಿಣ ಏಷ್ಯಾದ ಮೇಲೆ ಪರಮಾಣುವಿನ ಕರಿನೆರಳು ಬೀಳುತ್ತಿರುವ ಸಂದರ್ಭದಲ್ಲಿ ಕಾಶ್ಮೀರ ವಿವಾದ ಕುರಿತು ಭಾರತದೊಂದಿಗೆ ತುರ್ತು ಮಾತುಕತೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.
ಇಮ್ರಾನ್ ಖಾನ್ ಅವರು ಬರೆದ ಅಭಿಪ್ರಾಯವನ್ನು ನಾನು ಓದಿಲ್ಲ ಆದರೆ, ಪಾಕಿಸ್ತಾನ ಬಹಿರಂಗವಾಗಿಯೇ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವಾಗ ಅದರೊಂದಿಗೆ ಮಾತುಕತೆ ಆರಂಭ ಸಾಧ್ಯವೇ ಇಲ್ಲ, ಪಾಕಿಸ್ತಾನದ ಒಂದು ಮೂಲೆಯ ಕತ್ತಲೆಯಲ್ಲಿ ಕುಳಿತುಕೊಂಡು ಭಯೋತ್ಪಾದನೆ ಆರಂಭಿಸುವುದಲ್ಲ. ಅದು ಎಲ್ಲರಿಗೂ ಗೊತ್ತಾಗುವಂತೆಯೇ ಬಹಿರಂಗವಾಗಿಯೇ ನಡೆಯುತ್ತಿದೆ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿ ಕಾಶ್ಮೀರ ಪರಿಸ್ಥಿತಿ ನೋಡಿಕೊಂಡು ಹಂತಹಂತವಾಗಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…