ಬ್ರುಸೆಲ್: ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕುವುದು ಮತ್ತು ಅಂತಹ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಕಾಶ್ಮೀರದ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬರೆದ ಅಭಿಪ್ರಾಯದ ಬಗ್ಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.ದಕ್ಷಿಣ ಏಷ್ಯಾದ ಮೇಲೆ ಪರಮಾಣುವಿನ ಕರಿನೆರಳು ಬೀಳುತ್ತಿರುವ ಸಂದರ್ಭದಲ್ಲಿ ಕಾಶ್ಮೀರ ವಿವಾದ ಕುರಿತು ಭಾರತದೊಂದಿಗೆ ತುರ್ತು ಮಾತುಕತೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.
ಇಮ್ರಾನ್ ಖಾನ್ ಅವರು ಬರೆದ ಅಭಿಪ್ರಾಯವನ್ನು ನಾನು ಓದಿಲ್ಲ ಆದರೆ, ಪಾಕಿಸ್ತಾನ ಬಹಿರಂಗವಾಗಿಯೇ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವಾಗ ಅದರೊಂದಿಗೆ ಮಾತುಕತೆ ಆರಂಭ ಸಾಧ್ಯವೇ ಇಲ್ಲ, ಪಾಕಿಸ್ತಾನದ ಒಂದು ಮೂಲೆಯ ಕತ್ತಲೆಯಲ್ಲಿ ಕುಳಿತುಕೊಂಡು ಭಯೋತ್ಪಾದನೆ ಆರಂಭಿಸುವುದಲ್ಲ. ಅದು ಎಲ್ಲರಿಗೂ ಗೊತ್ತಾಗುವಂತೆಯೇ ಬಹಿರಂಗವಾಗಿಯೇ ನಡೆಯುತ್ತಿದೆ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿ ಕಾಶ್ಮೀರ ಪರಿಸ್ಥಿತಿ ನೋಡಿಕೊಂಡು ಹಂತಹಂತವಾಗಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…