Featured

ಪಾಕಿಸ್ಥಾನದ ಮೊತ್ತ ಮೊದಲ ಹಿಂದೂ ನ್ಯಾಯಾಧೀಶೆ ಸುಮನ್‌ ಕುಮಾರಿ ಬೊದಾನಿ – Vishwanews24

ಇಸ್ಲಾಮಾಬಾದ್‌ : ಸುಮನ್‌ ಕುಮಾರಿ ಬೊದಾನಿ ಅವರು ಪಾಕಿಸ್ಥಾನದ ಮೊತ್ತ ಮೊದಲ ಹಿಂದು ನ್ಯಾಯಾಧೀಶೆಯಾಗಿದ್ದಾರೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ಥಾನದ ಕಂಬರ್‌ – ಶಹದಾಕೋಟ್‌ನ ನಿವಾಸಿಯಾಗಿರುವ ಸುಮನ್‌ ಅವರು ತಮ್ಮ ಹುಟ್ಟೂರ ಜಿಲ್ಲೆಯಲ್ಲಿ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸಲಿದ್ದಾರೆ.

ಪಾಕಿಸ್ಥಾನದ ಕಂಬರ್‌ – ಶಶಹದಾದ್ಕೋಟ್ ಜಿಲ್ಲೆಯ ಮೂಲದವರಾದ ಸುಮನ್‌ ಅವರು ಅದೇ ಜಿಲ್ಲೆಯಲ್ಲಿ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸಲಿದ್ದಾರೆ. ಹೈದರಾಬಾದ್ ನಲ್ಲಿ ಎಲ್ಎಲ್ ಬಿ ಪೂರ್ಣಗೊಳಿಸಿರುವ ಸುಮನ್ ಕುಮಾರಿ, ಕರಾಚಿಯ ಸ್ಜಬಿಸ್ಟ್ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಗಳಿಸಿದ್ದಾರೆ.

ತಂದೆ  ಪವನ್‌ ಕುಮಾರ್‌ ಬೊದಾನಿ ಹೇಳುವ ಪ್ರಕಾರ  “ಸುಮನ್‌ ಗೆ ಹುಟ್ಟೂರ ಜಿಲ್ಲೆಯಲ್ಲಿನ ಬಡವರಿಗೆ ಉಚಿತ ಕಾನೂನು ನೆರವು ನೀಡುವಾಸೆ ಇದೆ. ಆಕೆ ತುಂಬಾ ಸವಾಲಿನ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾಳೆ. ಹಾಗಿದ್ದರೂ ತನ್ನ ಕಠಿನ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಆಕೆ ತನ್ನ ಸೇವಾ ಕ್ಷೇತ್ರದಲ್ಲಿ ಹೊಸ ಹೊಸ ಎತ್ತರಗಳನ್ನು ಕಾಣುವ ವಿಶ್ವಾಸವಿದೆ’.

ಪಾಕಿಸ್ಥಾನದ ಹಿಂದು ಸಮುದಾಯದ ಮೊತ್ತ ಮೊದಲ ನ್ಯಾಯಾಧೀಶರಾಗಿರುವ ರಾಣಾ ಭಗವಾನ್‌ದಾಸ್‌ ಅವರು 2005ರಿಂದ 2007ರ ವರೆಗಿನ ಅವಧಿಯಲ್ಲಿ ಪಾಕಿಸ್ಥಾನದ ಚೀಫ್ ಜಸ್ಟಿಸ್‌ ಆಗಿ ಸೇವೆ ಸಲ್ಲಿಸಿದ್ದಾರೆ.

ಪಾಕಿಸ್ಥಾನದ ಒಟ್ಟು ಜನಸಂಖ್ಯೆಯಲ್ಲಿ ಹಿಂದುಗಳು ಕೇವಲ ಶೇ.2ರಷ್ಟು ಇದ್ದಾರೆ. ಅಂತೆಯೇ ಪಾಕಿಸ್ಥಾನದಲ್ಲಿ ಇಸ್ಲಾಂ ಬಳಿಕದ ಅತೀ ದೊಡ್ಡ ಧರ್ಮವೇ ಹಿಂದು ಧರ್ಮವಾಗಿದೆ.

 

Vishwa News 24

Recent Posts

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

6 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

13 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

21 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

1 hour ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago