ಹರಿದ್ವಾರ : ‘ನಾವು ಪಾಕಿಸ್ಥಾನದ ವಿರುದ್ಧ ಯುದ್ಧ ಮಾಡಲೇಬೇಕು, ಏಕೆಂದರೆ ಇಸ್ಲಾಮಾಬಾದ್ ಗೆ ಯುದ್ಧ ಬಿಟ್ಟರೆ ಬೇರೆ ಯಾವುದೇ ಭಾಷೆ ಅರ್ಥವಾಗುವುದಿಲ್ಲ’ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಕಳೆದ ಫೆ.14ರಂದು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕನೋರ್ವ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ ಕನಿಷ್ಠ 40 ಸಿಆರ್ಪಿಎಫ್ ಯೋಧರು ಬಲಿಯಾಗಿರುವುದಕ್ಕೆ ತೀವ್ರ ಶೋಕ, ಆಘಾತ ವ್ಯಕ್ತಪಡಿಸಿರುವ ಬಾಬಾ ರಾಮದೇವ್, ‘ಯುದ್ಧದ ಹೊರತು ಯಾರೂ ಪರಿಶುದ್ಧರಾಗಲಾರರು; ಪಾಕಿಸ್ಥಾನ ಜನತೆಯ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ; ಆದರೆ ಪಾಕಿಸ್ಥಾನದಲ್ಲಿ ಅಧಿಕಾರದಲ್ಲಿರುವವರಿಗೆ ಯುದ್ಧ ಬಿಟ್ಟರೆ ಬೇರೆ ಭಾಷೆ ಅರ್ಥವಾಗುವುದಿಲ್ಲ; ಕಳೆದ 70 ವರ್ಷಗಳಿಂದಲೂ ನಾವು ಅವರೊಂದಿಗೆ ಮಾತನಾಡುತ್ತಲೇ ಬಂದಿದ್ದೇವೆ; ಆದರೆ ಅದೇ ವೇಳೆ ನಾವು ನಮ್ಮ 50,000 ಜನರನ್ನು ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.
‘ನಮ್ಮ ಜವಾನರನು ನಾವು ಕಳೆದುಕೊಳ್ಳುವ ಮಾತೇ ಇಲ್ಲ ; ಭಯೋತ್ಪಾದನೆ ಸಮಸ್ಯೆಯನ್ನು ಪೂರ್ಣವಾಗಿ ನಿವಾರಿಸಲು ಯುದ್ಧ ನಡೆಯಲೇಬೇಕಿದೆ ‘ ಎಂದು ಬಾಬಾ ರಾಮದೇವ್ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…