ಹರಿದ್ವಾರ : ‘ನಾವು ಪಾಕಿಸ್ಥಾನದ ವಿರುದ್ಧ ಯುದ್ಧ ಮಾಡಲೇಬೇಕು, ಏಕೆಂದರೆ ಇಸ್ಲಾಮಾಬಾದ್ ಗೆ ಯುದ್ಧ ಬಿಟ್ಟರೆ ಬೇರೆ ಯಾವುದೇ ಭಾಷೆ ಅರ್ಥವಾಗುವುದಿಲ್ಲ’ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಕಳೆದ ಫೆ.14ರಂದು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕನೋರ್ವ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ ಕನಿಷ್ಠ 40 ಸಿಆರ್ಪಿಎಫ್ ಯೋಧರು ಬಲಿಯಾಗಿರುವುದಕ್ಕೆ ತೀವ್ರ ಶೋಕ, ಆಘಾತ ವ್ಯಕ್ತಪಡಿಸಿರುವ ಬಾಬಾ ರಾಮದೇವ್, ‘ಯುದ್ಧದ ಹೊರತು ಯಾರೂ ಪರಿಶುದ್ಧರಾಗಲಾರರು; ಪಾಕಿಸ್ಥಾನ ಜನತೆಯ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ; ಆದರೆ ಪಾಕಿಸ್ಥಾನದಲ್ಲಿ ಅಧಿಕಾರದಲ್ಲಿರುವವರಿಗೆ ಯುದ್ಧ ಬಿಟ್ಟರೆ ಬೇರೆ ಭಾಷೆ ಅರ್ಥವಾಗುವುದಿಲ್ಲ; ಕಳೆದ 70 ವರ್ಷಗಳಿಂದಲೂ ನಾವು ಅವರೊಂದಿಗೆ ಮಾತನಾಡುತ್ತಲೇ ಬಂದಿದ್ದೇವೆ; ಆದರೆ ಅದೇ ವೇಳೆ ನಾವು ನಮ್ಮ 50,000 ಜನರನ್ನು ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.
‘ನಮ್ಮ ಜವಾನರನು ನಾವು ಕಳೆದುಕೊಳ್ಳುವ ಮಾತೇ ಇಲ್ಲ ; ಭಯೋತ್ಪಾದನೆ ಸಮಸ್ಯೆಯನ್ನು ಪೂರ್ಣವಾಗಿ ನಿವಾರಿಸಲು ಯುದ್ಧ ನಡೆಯಲೇಬೇಕಿದೆ ‘ ಎಂದು ಬಾಬಾ ರಾಮದೇವ್ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…