ಹರಿದ್ವಾರ : ‘ನಾವು ಪಾಕಿಸ್ಥಾನದ ವಿರುದ್ಧ ಯುದ್ಧ ಮಾಡಲೇಬೇಕು, ಏಕೆಂದರೆ ಇಸ್ಲಾಮಾಬಾದ್ ಗೆ ಯುದ್ಧ ಬಿಟ್ಟರೆ ಬೇರೆ ಯಾವುದೇ ಭಾಷೆ ಅರ್ಥವಾಗುವುದಿಲ್ಲ’ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಕಳೆದ ಫೆ.14ರಂದು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕನೋರ್ವ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ ಕನಿಷ್ಠ 40 ಸಿಆರ್ಪಿಎಫ್ ಯೋಧರು ಬಲಿಯಾಗಿರುವುದಕ್ಕೆ ತೀವ್ರ ಶೋಕ, ಆಘಾತ ವ್ಯಕ್ತಪಡಿಸಿರುವ ಬಾಬಾ ರಾಮದೇವ್, ‘ಯುದ್ಧದ ಹೊರತು ಯಾರೂ ಪರಿಶುದ್ಧರಾಗಲಾರರು; ಪಾಕಿಸ್ಥಾನ ಜನತೆಯ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ; ಆದರೆ ಪಾಕಿಸ್ಥಾನದಲ್ಲಿ ಅಧಿಕಾರದಲ್ಲಿರುವವರಿಗೆ ಯುದ್ಧ ಬಿಟ್ಟರೆ ಬೇರೆ ಭಾಷೆ ಅರ್ಥವಾಗುವುದಿಲ್ಲ; ಕಳೆದ 70 ವರ್ಷಗಳಿಂದಲೂ ನಾವು ಅವರೊಂದಿಗೆ ಮಾತನಾಡುತ್ತಲೇ ಬಂದಿದ್ದೇವೆ; ಆದರೆ ಅದೇ ವೇಳೆ ನಾವು ನಮ್ಮ 50,000 ಜನರನ್ನು ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.
‘ನಮ್ಮ ಜವಾನರನು ನಾವು ಕಳೆದುಕೊಳ್ಳುವ ಮಾತೇ ಇಲ್ಲ ; ಭಯೋತ್ಪಾದನೆ ಸಮಸ್ಯೆಯನ್ನು ಪೂರ್ಣವಾಗಿ ನಿವಾರಿಸಲು ಯುದ್ಧ ನಡೆಯಲೇಬೇಕಿದೆ ‘ ಎಂದು ಬಾಬಾ ರಾಮದೇವ್ ಹೇಳಿದರು.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…