ಪಾಕ್‌ ಪರ ಘೋಷಣೆ ಕೂಗಿದ್ದ ಪ್ರಕರಣ : ಬಿಡುಗಡೆಗೊಂಡಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಮತ್ತೆ ಬಂಧನ -Vishwanews24

ಹುಬ್ಬಳ್ಳಿ: ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದ ಮೂವರು ಕಾಶ್ಮೀರದವಿದ್ಯಾರ್ಥಿಗಳನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ವಿದ್ಯಾರ್ಥಿಗಳನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ.

ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮಿರ್, ಬಾಸಿತ್ ಹಾಗೂ ತಾಲಿಬ್ ಎಂಬುವವರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಇದು ವೈರಲ್ ಆದ ಬೆನ್ನಲ್ಲೇ ಹುಬ್ಬಳ್ಳಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು.

ಬಳಿಕ ಸಿಆರ್‌ಪಿಸಿ ಬಾಂಡ್‌ ಮೇಲೆ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಪೊಲೀಸರ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಕಾಂಗ್ರೆಸ್ ಮುಖಂಡರು ಕೂಡಾ ಪೊಲೀಸರ ನಡೆಯನ್ನು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಹಲವು ಕಡೆಗಳನ್ನು ಪ್ರತಿಭಟನೆಗಳು ನಡೆದಿದ್ದವು.

ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಹುಬ್ಬಳ್ಳಿಯ ಗೋಕುಲ್ ರೋಡ್‌ ಠಾಣಾ ಪೊಲೀಸರು ಭಾನುವಾರ ತಡರಾತ್ರಿ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

Vishwa News 24

Recent Posts

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

6 minutes ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

14 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

28 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

14 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

24 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 day ago