Featured

ಪಾಕ್ ನಲ್ಲಿ ಅಪಾರ ಹಿಂಸೆ ಅನುಭವಿಸಿದರೂ ದೇಶದ ರಹಸ್ಯವನ್ನು ಶತ್ರು ರಾಷ್ಟ್ರಕ್ಕೆ ಬಿಟ್ಟು ಕೊಡದ ವೀರ ಯೋಧ ಅಭಿನಂದನ್‌ -Vishwanews24

ನವದೆಹಲಿ:ಅಭಿನಂದನ್ ಅವರು ಪಾಕಿಸ್ತಾನದ ವಶದಲ್ಲಿದ್ದ ಮೊದಲ 24 ಗಂಟೆಗಳ ಕಾಲ ಬಹಳಷ್ಟು ಹಿಂಸೆ ಅನುಭವಿಸಿದ್ದು, ಅವರನ್ನು ಮಾನಸಿಕವಾಗಿ ಕುಗ್ಗಿಸಿದ್ದರು. ಹಾಗೂ ವಾಯುಪಡೆಯ ಅತ್ಯಮೂಲ್ಯ ಮಾಹಿತಿಯನ್ನು ಪಡೆಯುವ ವಿಫಲ ಯತ್ನ ನಡೆಸಿತ್ತು ಎಂದು ವರದಿಯಲ್ಲಿ ಹೇಳಲಾಗುತ್ತಿದೆ.

ಭಾರತೀಯ ವಾಯು ಪಡೆಯು ದಾಳಿ ವೇಳೆ ಬಳಸುತ್ತಿದ್ದ ಅತ್ಯಧಿಕ ಭದ್ರತೆಯ ರೇಡಿಯೋ ತರಂಗಾಂತರಗಳ ಮಾಹಿತಿ, ಭಾರತೀಯ ಸೇನೆಯ ನಿಯೋಜನೆ ಮತ್ತು ಅವುಗಳ ನಿಖರ ತಾಣ, ಅತಿ ಸೂಕ್ಷ್ಮ ಸೇನಾ ಸಾರಿಗೆ ಮಾಹಿತಿ, ದಾಳಿಗೆ ಭಾರತ ಸಿದ್ಧಪಡಿಸಿರುವ ಫೈಟರ್‌ ಜೆಟ್‌ಗಳ ನಿಖರ ಸಂಖ್ಯೆ ಇತ್ಯಾದಿಗಳ ರಹಸ್ಯ ಮಾಹಿತಿಯನ್ನು ಅಭಿನಂದನ್‌ ಅವರಿಂದ ಪಡೆಯಲು ಪಾಕ್‌ ಸೇನೆ ಇನ್ನಿಲ್ಲದ ರೀತಿಯ ಮಾನಸಿಕ ಹಿಂಸೆಯನ್ನು ನೀಡಿತ್ತು.

ಅಭಿನಂದನ್‌ ಅವರಿಂದ ಐಎಎಫ್ ರೇಡಿಯೋ ತರಂಗಾಂತರ ಮಾತ್ರವಲ್ಲದೆ ಇನ್ನಿತರ ಹಲವು ರಹಸ್ಯ ಮಾಹಿತಿಗಳನ್ನು ಪಡೆಯಲು ಪಾಕ್‌ ಸೇನೆ ಆತನಿಗೆ ದಿನಪೂರ್ತಿ ನಿಂತಿರುವ ಶಿಕ್ಷೆ ನೀಡಿತು. ಮಾತ್ರವಲ್ಲದೆ ಕಿವಿ ತಮಟೆ ಕಿತ್ತುಹೋಗುವಷ್ಟು ದೊಡ್ಡ ಸದ್ದಿನ ಸಂಗೀತವನ್ನು ಆತ ಬಲವಂತದಿಂದ ಕೇಳುವಂತೆ ಮಾಡಿತು. ಜತೆಗೆ ದೈಹಿಕವಾಗಿ ಆತನ ಮೇಲೆ ಹಲ್ಲೆ ನಡೆಸಲಾಯಿತು.

ವರ್ಧಮಾನ್‌ ಅವರು ಪಾಕ್‌ ನಿಂದ ಬಿಡುಗಡೆಯಾಗಿ ಭಾರತಕ್ಕೆ ಬಂದ ಬಳಿಕ ಮಿಲಿಟರಿ ಆಸ್ಪತ್ರೆಯಲ್ಲಿನ “ಕೂಲಿಂಗ್‌ ಡೌನ್‌’ ಪ್ರಕ್ರಿಯೆಯಲ್ಲಿ ತನ್ನ ಹಿರಿಯ ಅಧಿಕಾರಿಗಳಿಗೆ ತಾನು ಪಾಕ್‌ ಸೇನೆಯ ವಶದಲ್ಲಿದ್ದಾಗ ಅನುಭವಿಸಿದ್ದ ನರಕ ಯಾತನೆಯ ವಿವರಗಳನ್ನು ತಿಳಿಸಿದರು.

ನಮ್ಮ ದೇಶದ ಆ ನಾಯಕ ಪಾಕ್ ನೀಡಿದ ಎಲ್ಲಾ ಹಿಂಸೆಯನ್ನು ಸಹಿಸಿಕೊಂಡು ಶತ್ರು ಸೇನೆಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಡದಿರುವಲ್ಲಿ ಯಶಸ್ವಿಯಾದರು ಎಂದು ಹಿಂದುಸ್ಥಾನ್‌ ಟೈಮ್ಸ್‌ ತನ್ನ ವರದಿಯಲ್ಲಿ ಹೇಳಿದೆ.

ಶತ್ರು ರಾಷ್ಟ್ರದಲ್ಲಿ ಹಿಂಸೆ ನೀಡಿದ್ರೂ ಅಭಿನಂದನ್ ಯಾವುದೇ ರಹಸ್ಯವನ್ನು ಬಿಟ್ಟುಕೊಟ್ಟಿಲ್ಲ. ಪಾಕ್ ಸೇನೆ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಹಿಂಸೆ ನೀಡಿದರೂ, ಅವರು ಯಾವುದೇ ಮಾಹಿತಿ ನೀಡದೆ ದೇಶ ಪ್ರೇಮ ಮೆರೆದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago