Featured

ಪಾಕ್ ನಲ್ಲಿ ಅಪಾರ ಹಿಂಸೆ ಅನುಭವಿಸಿದರೂ ದೇಶದ ರಹಸ್ಯವನ್ನು ಶತ್ರು ರಾಷ್ಟ್ರಕ್ಕೆ ಬಿಟ್ಟು ಕೊಡದ ವೀರ ಯೋಧ ಅಭಿನಂದನ್‌ -Vishwanews24

ನವದೆಹಲಿ:ಅಭಿನಂದನ್ ಅವರು ಪಾಕಿಸ್ತಾನದ ವಶದಲ್ಲಿದ್ದ ಮೊದಲ 24 ಗಂಟೆಗಳ ಕಾಲ ಬಹಳಷ್ಟು ಹಿಂಸೆ ಅನುಭವಿಸಿದ್ದು, ಅವರನ್ನು ಮಾನಸಿಕವಾಗಿ ಕುಗ್ಗಿಸಿದ್ದರು. ಹಾಗೂ ವಾಯುಪಡೆಯ ಅತ್ಯಮೂಲ್ಯ ಮಾಹಿತಿಯನ್ನು ಪಡೆಯುವ ವಿಫಲ ಯತ್ನ ನಡೆಸಿತ್ತು ಎಂದು ವರದಿಯಲ್ಲಿ ಹೇಳಲಾಗುತ್ತಿದೆ.

ಭಾರತೀಯ ವಾಯು ಪಡೆಯು ದಾಳಿ ವೇಳೆ ಬಳಸುತ್ತಿದ್ದ ಅತ್ಯಧಿಕ ಭದ್ರತೆಯ ರೇಡಿಯೋ ತರಂಗಾಂತರಗಳ ಮಾಹಿತಿ, ಭಾರತೀಯ ಸೇನೆಯ ನಿಯೋಜನೆ ಮತ್ತು ಅವುಗಳ ನಿಖರ ತಾಣ, ಅತಿ ಸೂಕ್ಷ್ಮ ಸೇನಾ ಸಾರಿಗೆ ಮಾಹಿತಿ, ದಾಳಿಗೆ ಭಾರತ ಸಿದ್ಧಪಡಿಸಿರುವ ಫೈಟರ್‌ ಜೆಟ್‌ಗಳ ನಿಖರ ಸಂಖ್ಯೆ ಇತ್ಯಾದಿಗಳ ರಹಸ್ಯ ಮಾಹಿತಿಯನ್ನು ಅಭಿನಂದನ್‌ ಅವರಿಂದ ಪಡೆಯಲು ಪಾಕ್‌ ಸೇನೆ ಇನ್ನಿಲ್ಲದ ರೀತಿಯ ಮಾನಸಿಕ ಹಿಂಸೆಯನ್ನು ನೀಡಿತ್ತು.

ಅಭಿನಂದನ್‌ ಅವರಿಂದ ಐಎಎಫ್ ರೇಡಿಯೋ ತರಂಗಾಂತರ ಮಾತ್ರವಲ್ಲದೆ ಇನ್ನಿತರ ಹಲವು ರಹಸ್ಯ ಮಾಹಿತಿಗಳನ್ನು ಪಡೆಯಲು ಪಾಕ್‌ ಸೇನೆ ಆತನಿಗೆ ದಿನಪೂರ್ತಿ ನಿಂತಿರುವ ಶಿಕ್ಷೆ ನೀಡಿತು. ಮಾತ್ರವಲ್ಲದೆ ಕಿವಿ ತಮಟೆ ಕಿತ್ತುಹೋಗುವಷ್ಟು ದೊಡ್ಡ ಸದ್ದಿನ ಸಂಗೀತವನ್ನು ಆತ ಬಲವಂತದಿಂದ ಕೇಳುವಂತೆ ಮಾಡಿತು. ಜತೆಗೆ ದೈಹಿಕವಾಗಿ ಆತನ ಮೇಲೆ ಹಲ್ಲೆ ನಡೆಸಲಾಯಿತು.

ವರ್ಧಮಾನ್‌ ಅವರು ಪಾಕ್‌ ನಿಂದ ಬಿಡುಗಡೆಯಾಗಿ ಭಾರತಕ್ಕೆ ಬಂದ ಬಳಿಕ ಮಿಲಿಟರಿ ಆಸ್ಪತ್ರೆಯಲ್ಲಿನ “ಕೂಲಿಂಗ್‌ ಡೌನ್‌’ ಪ್ರಕ್ರಿಯೆಯಲ್ಲಿ ತನ್ನ ಹಿರಿಯ ಅಧಿಕಾರಿಗಳಿಗೆ ತಾನು ಪಾಕ್‌ ಸೇನೆಯ ವಶದಲ್ಲಿದ್ದಾಗ ಅನುಭವಿಸಿದ್ದ ನರಕ ಯಾತನೆಯ ವಿವರಗಳನ್ನು ತಿಳಿಸಿದರು.

ನಮ್ಮ ದೇಶದ ಆ ನಾಯಕ ಪಾಕ್ ನೀಡಿದ ಎಲ್ಲಾ ಹಿಂಸೆಯನ್ನು ಸಹಿಸಿಕೊಂಡು ಶತ್ರು ಸೇನೆಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಡದಿರುವಲ್ಲಿ ಯಶಸ್ವಿಯಾದರು ಎಂದು ಹಿಂದುಸ್ಥಾನ್‌ ಟೈಮ್ಸ್‌ ತನ್ನ ವರದಿಯಲ್ಲಿ ಹೇಳಿದೆ.

ಶತ್ರು ರಾಷ್ಟ್ರದಲ್ಲಿ ಹಿಂಸೆ ನೀಡಿದ್ರೂ ಅಭಿನಂದನ್ ಯಾವುದೇ ರಹಸ್ಯವನ್ನು ಬಿಟ್ಟುಕೊಟ್ಟಿಲ್ಲ. ಪಾಕ್ ಸೇನೆ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಹಿಂಸೆ ನೀಡಿದರೂ, ಅವರು ಯಾವುದೇ ಮಾಹಿತಿ ನೀಡದೆ ದೇಶ ಪ್ರೇಮ ಮೆರೆದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago