ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದೇಶದ್ರೋಹಿ ಅಮೂಲ್ಯ ಹಿನ್ನೆಲೆ ಕುರಿತು ಸಂಪೂರ್ಣ ತನಿಖೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲ ದೇಶದ್ರೋಹಿಗಳನ್ನ ಸಹಿಸೊಲ್ಲ ಅಂತ ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಅಮೂಲ್ಯ ಲಿಯೋನ್ ಳನ್ನ ಬಂಧನ ಮಾಡಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗಿದೆ. ಪ್ರಕರಣದ ತನಿಖೆ ಆಗ್ತಿದೆ. ಆಕೆ ಸಂಪೂರ್ಣ ಇತಿಹಾಸ ಶೋಧ ಮಾಡ್ತೀವಿ. ಆಕೆಯ ಹಿನ್ನೆಲೆ ಬಗ್ಗೆ ಸಂಪೂರ್ಣ ತನಿಖೆ ಆಗುತ್ತೆ ಅಂತ ತಿಳಿಸಿದ್ರು. ನ್ಯಾಯಾಂಗ ಬಂಧನದಲ್ಲಿದ್ದರು ಆಕೆಯನ್ನ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡ್ತೀವಿ ಅಂತ ಸ್ಪಷ್ಟಪಡಿಸಿದರು.
ಇನ್ನು ಆಯೋಜಕರು ಆಕೆಯನ್ನ ಕಾರ್ಯಕ್ರಮಕ್ಕೆ ಕರೆದ್ರಾ? ಅನ್ನೋದನ್ನ ತನಿಖೆ ಮಾಡುತ್ತೇವೆ. ಮೇಲ್ನೋಟಕ್ಕೆ ಆಕೆ ಗೆಸ್ಟ್ ರೀತಿ ಬಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ ಅನ್ನಿಸುತ್ತಿದೆ. ಹೀಗಾಗಿ ಆಯೋಜಕರಿಗೆ ನೋಟಿಸ್ ಕೊಟ್ಟು ತನಿಖೆ ಮಾಡಲಾಗುವುದು. ಎಡಪಂಥೀಯ ಚಿಂತಕರು ಸೇರಿದಂತೆ ಬೇರೆ ಚಿಂತಕರ ಕೈವಾಡದ ಬಗ್ಗೆ ಸಂಪೂರ್ಣ ತನಿಖೆ ಆಗಲಿದೆ. ಅಮೂಲ್ಯ ಗಡಿಪಾರು ವಿಚಾರದ ಬಗ್ಗೆ ಪರಿಶೀಲನೆ ಮಾಡಿಲ್ಲ. ನಮ್ಮಲ್ಲಿ ಬಿಗಿಯಾದ ಕಾನೂನುಗಳು ಇವೆ. ಈ ಕಾನೂನಿನ ಅನ್ವಯವೇ ಪ್ರಬಲವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…