ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದೇಶದ್ರೋಹಿ ಅಮೂಲ್ಯ ಹಿನ್ನೆಲೆ ಕುರಿತು ಸಂಪೂರ್ಣ ತನಿಖೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲ ದೇಶದ್ರೋಹಿಗಳನ್ನ ಸಹಿಸೊಲ್ಲ ಅಂತ ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಅಮೂಲ್ಯ ಲಿಯೋನ್ ಳನ್ನ ಬಂಧನ ಮಾಡಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗಿದೆ. ಪ್ರಕರಣದ ತನಿಖೆ ಆಗ್ತಿದೆ. ಆಕೆ ಸಂಪೂರ್ಣ ಇತಿಹಾಸ ಶೋಧ ಮಾಡ್ತೀವಿ. ಆಕೆಯ ಹಿನ್ನೆಲೆ ಬಗ್ಗೆ ಸಂಪೂರ್ಣ ತನಿಖೆ ಆಗುತ್ತೆ ಅಂತ ತಿಳಿಸಿದ್ರು. ನ್ಯಾಯಾಂಗ ಬಂಧನದಲ್ಲಿದ್ದರು ಆಕೆಯನ್ನ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡ್ತೀವಿ ಅಂತ ಸ್ಪಷ್ಟಪಡಿಸಿದರು.
ಇನ್ನು ಆಯೋಜಕರು ಆಕೆಯನ್ನ ಕಾರ್ಯಕ್ರಮಕ್ಕೆ ಕರೆದ್ರಾ? ಅನ್ನೋದನ್ನ ತನಿಖೆ ಮಾಡುತ್ತೇವೆ. ಮೇಲ್ನೋಟಕ್ಕೆ ಆಕೆ ಗೆಸ್ಟ್ ರೀತಿ ಬಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ ಅನ್ನಿಸುತ್ತಿದೆ. ಹೀಗಾಗಿ ಆಯೋಜಕರಿಗೆ ನೋಟಿಸ್ ಕೊಟ್ಟು ತನಿಖೆ ಮಾಡಲಾಗುವುದು. ಎಡಪಂಥೀಯ ಚಿಂತಕರು ಸೇರಿದಂತೆ ಬೇರೆ ಚಿಂತಕರ ಕೈವಾಡದ ಬಗ್ಗೆ ಸಂಪೂರ್ಣ ತನಿಖೆ ಆಗಲಿದೆ. ಅಮೂಲ್ಯ ಗಡಿಪಾರು ವಿಚಾರದ ಬಗ್ಗೆ ಪರಿಶೀಲನೆ ಮಾಡಿಲ್ಲ. ನಮ್ಮಲ್ಲಿ ಬಿಗಿಯಾದ ಕಾನೂನುಗಳು ಇವೆ. ಈ ಕಾನೂನಿನ ಅನ್ವಯವೇ ಪ್ರಬಲವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…