ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ದೇಶದ್ರೋಹಿಗಳನ್ನ ಸಹಿಸೊಲ್ಲ : ಬಸವರಾಜ್ ಬೊಮ್ಮಾಯಿ -Vishwanews24

ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದೇಶದ್ರೋಹಿ ಅಮೂಲ್ಯ ಹಿನ್ನೆಲೆ ಕುರಿತು ಸಂಪೂರ್ಣ ತನಿಖೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲ ದೇಶದ್ರೋಹಿಗಳನ್ನ ಸಹಿಸೊಲ್ಲ ಅಂತ ಎಚ್ಚರಿಕೆ ಕೊಟ್ಟಿದ್ದಾರೆ.

ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಅಮೂಲ್ಯ ಲಿಯೋನ್ ಳನ್ನ ಬಂಧನ ಮಾಡಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗಿದೆ. ಪ್ರಕರಣದ ತನಿಖೆ ಆಗ್ತಿದೆ. ಆಕೆ ಸಂಪೂರ್ಣ ಇತಿಹಾಸ ಶೋಧ ಮಾಡ್ತೀವಿ. ಆಕೆಯ ಹಿನ್ನೆಲೆ ಬಗ್ಗೆ ಸಂಪೂರ್ಣ ತನಿಖೆ ಆಗುತ್ತೆ ಅಂತ ತಿಳಿಸಿದ್ರು. ನ್ಯಾಯಾಂಗ ಬಂಧನದಲ್ಲಿದ್ದರು ಆಕೆಯನ್ನ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡ್ತೀವಿ ಅಂತ ಸ್ಪಷ್ಟಪಡಿಸಿದರು.

ಇನ್ನು ಆಯೋಜಕರು ಆಕೆಯನ್ನ ಕಾರ್ಯಕ್ರಮಕ್ಕೆ ಕರೆದ್ರಾ? ಅನ್ನೋದನ್ನ ತನಿಖೆ ಮಾಡುತ್ತೇವೆ. ಮೇಲ್ನೋಟಕ್ಕೆ ಆಕೆ ಗೆಸ್ಟ್ ರೀತಿ ಬಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ ಅನ್ನಿಸುತ್ತಿದೆ. ಹೀಗಾಗಿ ಆಯೋಜಕರಿಗೆ ನೋಟಿಸ್ ಕೊಟ್ಟು ತನಿಖೆ ಮಾಡಲಾಗುವುದು. ಎಡಪಂಥೀಯ ಚಿಂತಕರು ಸೇರಿದಂತೆ ಬೇರೆ ಚಿಂತಕರ ಕೈವಾಡದ ಬಗ್ಗೆ ಸಂಪೂರ್ಣ ತನಿಖೆ ಆಗಲಿದೆ. ಅಮೂಲ್ಯ ಗಡಿಪಾರು ವಿಚಾರದ ಬಗ್ಗೆ ಪರಿಶೀಲನೆ ಮಾಡಿಲ್ಲ. ನಮ್ಮಲ್ಲಿ ಬಿಗಿಯಾದ ಕಾನೂನುಗಳು ಇವೆ. ಈ ಕಾನೂನಿನ ಅನ್ವಯವೇ ಪ್ರಬಲವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

3 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago