ಇಸ್ಲಾಮಾಬಾದ್: ಪಾಕಿಸ್ತಾನ ದೇಶವು ಸದ್ಭಾವನಾ ಸಂದೇಶ ಸಾರುವ ಮೂಲಕ ಪಾಕಿಸ್ತಾನ ಜೈಲಿನಲ್ಲಿದ್ದ 55 ಭಾರತೀಯ ಮೀನುಗಾರರು ಹಾಗೂ ಅನ್ಯ ಐವರು ನಾಗರಿಕರನ್ನು ಬಿಡುಗಡೆಗೊಳಿಸಿದೆ.
ಈದಿ ಫೌಂಡೇಷನ್ ಅಧ್ಯಕ್ಷ ಫೈಜಲ್ ಈದಿ ಹಾಗೂ ಸಾಧ್ ಈದಿ ಅವರ ಸಲಹೆಯ ಮೇರೆಗೆ ಭಾರತೀಯ ಮೀನುಗಾರರನ್ನು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಕರೆ ತಂದು, ನಂತರ ಬಸ್ಸಿನಲ್ಲಿ ಲಾಹೋರ್ ಕ್ಕೆ ಕಳುಹಿಸಲಾಯಿತು. ಅಲ್ಲದೆ ಬಿಡುಗಡೆಗೊಂಡವರಿಗೆ ಈದಿ ಫೌಂಡೇಷನ್ ಐದು ಸಾವಿರ ರೂ. ನೀಡಿ ಸತ್ಕರಿಸಲಾಗಿದ್ದು, ವಿಶೇಷ ಬಸ್ ಮೂಲಕ ಅವರನ್ನು ವಾಘಾ ಗಡಿಗೆ ಕಳುಹಿಸಿಕೊಡಲಿದ್ದಾರೆ.
ಎರಡು ದೇಶಗಳ ಮಧ್ಯೆ ಸದ್ಭಾವನಾ ಸಂದೇಶ ಸಾರುವುದಕ್ಕಾಗಿ ಪಾಕಿಸ್ತಾನ, ಭಾರತೀಯ 360 ಕೈದಿಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಂಡ 355 ಮೀನುಗಾರರು ಹಾಗೂ ಐವರು ಭಾರತೀಯ ನಾಗರಿಕರು ಕೂಡ ಒಳಗೊಂಡಿದ್ದಾರೆ.
ಜನವರಿ ತಿಂಗಳಲ್ಲಿಯೇ ಎರಡು ದೇಶಗಳು ಕೈದಿಗಳ ಪಟ್ಟಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡಿದ್ದವು. ಅದರನ್ವಯ ಭಾರತೀಯ ಜೈಲಿನಲ್ಲಿದ 347 ಪಾಕಿಸ್ತಾನಿ ಕೈದಿಗಳು ಬಂಧಿಯಾಗಿದ್ದು, ಅದರಲ್ಲಿ 249 ನಾಗರಿಕರು ಹಾಗೂ 98 ಮೀನುಗಾರರಿದ್ದಾರೆ.
ಎರಡು ದೇಶಗಳ ಮಧ್ಯೆ ಸದ್ಭಾವನಾ ಸಂದೇಶ ಸಾರುವುದಕ್ಕಾಗಿ ಪಾಕಿಸ್ತಾನ, ಭಾರತೀಯ 360 ಕೈದಿಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಇದರಲ್ಲಿ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಂಡ 355 ಮೀನುಗಾರರು ಹಾಗೂ ಐವರು ಭಾರತೀಯ ನಾಗರಿಕರು ಕೂಡ ಒಳಗೊಂಡಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…