ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ನಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಾ. 30 ರ ಮಂಗಳವಾರ ಇಲ್ಲಿನ ಮೆಲ್ಕಾರ್ ಪಾಣೆಮಂಗಳೂರು ಬಳಿ ನಡೆದಿದೆ.
ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ
ಅವರು ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಮುಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ.
ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಘನಾಥ, ಶೇಖರ ಐಕಳ, ಮುದರ, ರಾಜೇಶ್, ಸಂದೀಪ್ ಗೋಪಾಲ ಎಂಬವರಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ : ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…