Featured

ಪಾದೂರು ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕ ಲಾಲಾಜಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ -ಆಗ್ರಹದ ಮನವಿ ಸಲ್ಲಿಕೆ-_vishwanews24

ಉಡುಪಿ :  ಕಾಪು ತಾಲೂಕು ಪಾದೂರು ಗ್ರಾಮದಲ್ಲಿ ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ  ಆಗ್ರಹದ ಮನವಿ ಸಲ್ಲಿಸಿದರು
ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಪೆಟ್ರೋಲಿಯಮ್ ಸಚಿವಾಲಯದ ಅಧೀನದಲ್ಲಿರುವ ಐ.ಎಸ್.ಪಿ.ಅರ್.ಎಲ್. ಇದರ “ಕಚ್ಚಾತೈಲ ಸಂಗ್ರಹಣಾಗಾರ ಘಟಕದ ಅನುಷ್ಠಾನಗೊಂಡಿದ್ದು
ಪ್ರಸ್ತುತ ಪಾದೂರಿನಲ್ಲಿ ‘ಕಚ್ಚಾ ತೈಲ ಸಂಗ್ರಹಣಾಗಾರದ 2ನೇ ಘಟಕವನ್ನು ಸ್ಥಾಪಿಸಲು 1SPRL ಉದ್ದೇಶಿಸಿದ್ದು ಈ ಘಟಕಕ್ಕೆ ಸುಮಾರು 210 ಎಕರೆಗಳಷ್ಟು ಭೂಸ್ವಾಧೀನವನ್ನು ಮಾಡುವರೇ ಎ.ಎಸ್.ಪಿ.ಆರ್. ಕಂಪೆನಿಯವರು. ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಿದ್ದು‌
ಈ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ನಿರ್ವಸಿತರಾಗುವ ಸಂಭವವಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಗೆ ಮತ್ತು ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಸರಿಯಾದ ಮಾಹಿತಿ ಒದಗಿಸಿರುವುದಿಲ್ಲ.ಭೂಮಿಯ ಮೌಲ್ಯದ ಹೆಚ್ಚಳ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ನೀಡುವ ಪರಿಹಾರಧನ, ಪುನರ್ವಸತಿ, ಸಿರಾಸ್ತಿಗಳಿಗೆ ನೀಡುವ ಪರಿಹಾರ ಧನದ ಮಾರ್ಗಸೂಚಿಗಳು ಮತ್ತು ಇನ್ನಿತರ ಸಮಸ್ಯೆಗಳು ಮತ್ತು ಗೊಂದಲಗಳ ಬಗ್ಗೆ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಅತ್ಯಂತ ಶೀಘ್ರವಾಗಿ , ISPRL ಅಧಿಕಾರಿಗಳು, ಕೆ.ಐ.ಎ.ಡಿ.ಬಿ.(SLO) ಅಧಿಕಾರಿಗಳು ಮತ್ತು ಪರಿಹಾರಧನದ ಮೌಲ್ಯ ಮಾಪನ ಮಾಡುವ ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಭೂಮಿ ಕಳೆದುಕೊಳ್ಳುವ ಸಂತ್ರಸ್ತರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ಡೆಸಿ ಜನರ ಗೊಂದಲವನ್ನು ನಿವಾರಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹ ಪತ್ರ ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಾದೂರು-ಕಳತ್ತೂರು ಜನಜಾಗೃತಿ  ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು,ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸಂದೀಪ್ ರಾವ್,ಪ್ರಸಾದ್ ಶೆಟ್ಟಿ ವಳದೂರು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಮೂಳೂರು
Vishwanews24∴

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago