Featured

ಪಾದೂರು ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕ ಲಾಲಾಜಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ -ಆಗ್ರಹದ ಮನವಿ ಸಲ್ಲಿಕೆ-_vishwanews24

ಉಡುಪಿ :  ಕಾಪು ತಾಲೂಕು ಪಾದೂರು ಗ್ರಾಮದಲ್ಲಿ ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ  ಆಗ್ರಹದ ಮನವಿ ಸಲ್ಲಿಸಿದರು
ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಪೆಟ್ರೋಲಿಯಮ್ ಸಚಿವಾಲಯದ ಅಧೀನದಲ್ಲಿರುವ ಐ.ಎಸ್.ಪಿ.ಅರ್.ಎಲ್. ಇದರ “ಕಚ್ಚಾತೈಲ ಸಂಗ್ರಹಣಾಗಾರ ಘಟಕದ ಅನುಷ್ಠಾನಗೊಂಡಿದ್ದು
ಪ್ರಸ್ತುತ ಪಾದೂರಿನಲ್ಲಿ ‘ಕಚ್ಚಾ ತೈಲ ಸಂಗ್ರಹಣಾಗಾರದ 2ನೇ ಘಟಕವನ್ನು ಸ್ಥಾಪಿಸಲು 1SPRL ಉದ್ದೇಶಿಸಿದ್ದು ಈ ಘಟಕಕ್ಕೆ ಸುಮಾರು 210 ಎಕರೆಗಳಷ್ಟು ಭೂಸ್ವಾಧೀನವನ್ನು ಮಾಡುವರೇ ಎ.ಎಸ್.ಪಿ.ಆರ್. ಕಂಪೆನಿಯವರು. ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಿದ್ದು‌
ಈ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ನಿರ್ವಸಿತರಾಗುವ ಸಂಭವವಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಗೆ ಮತ್ತು ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಸರಿಯಾದ ಮಾಹಿತಿ ಒದಗಿಸಿರುವುದಿಲ್ಲ.ಭೂಮಿಯ ಮೌಲ್ಯದ ಹೆಚ್ಚಳ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ನೀಡುವ ಪರಿಹಾರಧನ, ಪುನರ್ವಸತಿ, ಸಿರಾಸ್ತಿಗಳಿಗೆ ನೀಡುವ ಪರಿಹಾರ ಧನದ ಮಾರ್ಗಸೂಚಿಗಳು ಮತ್ತು ಇನ್ನಿತರ ಸಮಸ್ಯೆಗಳು ಮತ್ತು ಗೊಂದಲಗಳ ಬಗ್ಗೆ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಅತ್ಯಂತ ಶೀಘ್ರವಾಗಿ , ISPRL ಅಧಿಕಾರಿಗಳು, ಕೆ.ಐ.ಎ.ಡಿ.ಬಿ.(SLO) ಅಧಿಕಾರಿಗಳು ಮತ್ತು ಪರಿಹಾರಧನದ ಮೌಲ್ಯ ಮಾಪನ ಮಾಡುವ ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಭೂಮಿ ಕಳೆದುಕೊಳ್ಳುವ ಸಂತ್ರಸ್ತರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ಡೆಸಿ ಜನರ ಗೊಂದಲವನ್ನು ನಿವಾರಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹ ಪತ್ರ ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಾದೂರು-ಕಳತ್ತೂರು ಜನಜಾಗೃತಿ  ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು,ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸಂದೀಪ್ ರಾವ್,ಪ್ರಸಾದ್ ಶೆಟ್ಟಿ ವಳದೂರು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಮೂಳೂರು
Vishwanews24∴

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

12 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

12 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

12 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

12 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

13 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

13 hours ago