ಉಡುಪಿ : ಕಾಪು ತಾಲೂಕು ಪಾದೂರು ಗ್ರಾಮದಲ್ಲಿ ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಆಗ್ರಹದ ಮನವಿ ಸಲ್ಲಿಸಿದರು
ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಪೆಟ್ರೋಲಿಯಮ್ ಸಚಿವಾಲಯದ ಅಧೀನದಲ್ಲಿರುವ ಐ.ಎಸ್.ಪಿ.ಅರ್.ಎಲ್. ಇದರ “ಕಚ್ಚಾತೈಲ ಸಂಗ್ರಹಣಾಗಾರ ಘಟಕದ ಅನುಷ್ಠಾನಗೊಂಡಿದ್ದು
ಪ್ರಸ್ತುತ ಪಾದೂರಿನಲ್ಲಿ ‘ಕಚ್ಚಾ ತೈಲ ಸಂಗ್ರಹಣಾಗಾರದ 2ನೇ ಘಟಕವನ್ನು ಸ್ಥಾಪಿಸಲು 1SPRL ಉದ್ದೇಶಿಸಿದ್ದು ಈ ಘಟಕಕ್ಕೆ ಸುಮಾರು 210 ಎಕರೆಗಳಷ್ಟು ಭೂಸ್ವಾಧೀನವನ್ನು ಮಾಡುವರೇ ಎ.ಎಸ್.ಪಿ.ಆರ್. ಕಂಪೆನಿಯವರು. ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಿದ್ದು
ಈ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ನಿರ್ವಸಿತರಾಗುವ ಸಂಭವವಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಗೆ ಮತ್ತು ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಸರಿಯಾದ ಮಾಹಿತಿ ಒದಗಿಸಿರುವುದಿಲ್ಲ.ಭೂಮಿಯ ಮೌಲ್ಯದ ಹೆಚ್ಚಳ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ನೀಡುವ ಪರಿಹಾರಧನ, ಪುನರ್ವಸತಿ, ಸಿರಾಸ್ತಿಗಳಿಗೆ ನೀಡುವ ಪರಿಹಾರ ಧನದ ಮಾರ್ಗಸೂಚಿಗಳು ಮತ್ತು ಇನ್ನಿತರ ಸಮಸ್ಯೆಗಳು ಮತ್ತು ಗೊಂದಲಗಳ ಬಗ್ಗೆ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಅತ್ಯಂತ ಶೀಘ್ರವಾಗಿ , ISPRL ಅಧಿಕಾರಿಗಳು, ಕೆ.ಐ.ಎ.ಡಿ.ಬಿ.(SLO) ಅಧಿಕಾರಿಗಳು ಮತ್ತು ಪರಿಹಾರಧನದ ಮೌಲ್ಯ ಮಾಪನ ಮಾಡುವ ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಭೂಮಿ ಕಳೆದುಕೊಳ್ಳುವ ಸಂತ್ರಸ್ತರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ಡೆಸಿ ಜನರ ಗೊಂದಲವನ್ನು ನಿವಾರಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹ ಪತ್ರ ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಾದೂರು-ಕಳತ್ತೂರು ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು,ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸಂದೀಪ್ ರಾವ್,ಪ್ರಸಾದ್ ಶೆಟ್ಟಿ ವಳದೂರು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಮೂಳೂರು
Vishwanews24∴
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…