ಪಾದೂರು ISPRL ನಲ್ಲಿ ಅನಿಲ ಸೋರಿಕೆ ಶಂಕೆ ಗ್ರಾಮಸ್ಥರಲ್ಲಿ ಆತಂಕ.
ಕಾಪು: ಕಾಪು ತಾಲೂಕಿನ ಪಾದೂರು ISPRL ನಲ್ಲಿ ನಿರ್ಮಾಣವಾಗಿರುವ ಕಚ್ಚಾತೈಲ ಸಂಗ್ರಹಗಾರದಲ್ಲಿ ಅನಿಲ ಸೋರಿಕೆಯ ಭೀತಿ ಎದುರಾಗಿದ್ದು ಸ್ಥಳಿಯರು ಆತಂಕಿತರಾಗಿದ್ದಾರೆ.
ಸೋಮವಾರ ಮಧ್ಯಾಹ್ನದಿಂದ ಅನಿಲವಾಸನೆ ಬರುತ್ತಿದ್ದು ಕೂರಾಲು ಪರಿಸರದಲ್ಲಿ ಮಕ್ಜಳು ಸೇರಿ ಹಿರಿಯರು ವಾಂತಿ ಮಾಡಿದ್ದು ಮೂರ್ಛೆ ತಪ್ಪಿದ ಅನುಭವಕ್ಕೆ ಒಳಗಾಗಿದ್ದಾರೆ
ಈ ಬಗ್ಗೆ ಸ್ಥಳಿಯರು ಮಜೂರು ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿದ್ದು ಪಂಚಾಯತ್ ಆಡಳಿತವು ಈ ಬಗ್ಗೆ ಗಮನಹರಿಸುವಂತೆ ಕಂಪೆನಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸಂಜೆಯವರೆಗೂ ಅನಿಲವಾಸನೆ ಮುಂದುವರಿದ ಹಿನ್ನಲೆಯಲ್ಲಿ ಸ್ಥಳಿಯ ಜನಜಾಗೃತಿ ಸಮಿತಿಯೊಂದಿಗೆ ಜನಪ್ರತಿನಿಧಿಗಳು ಮತ್ತು ಸ್ಥಳಿಯರು ಅನಿಲವಾಸನೆಯ ಜಾಡು ಹುಡುಕಲಾರಂಭಿಸಿದರು.ಈಬಗ್ಗೆ ತಹಶಿಲ್ದಾರ್ ಪೋಲಿಸ್ ಇಲಾಖೆ ಮತ್ತು ಮಾಲಿನ್ಯ ನಿಯಂತ್ರಣ ಇಲಾಖೆಗೂ ಮಾಹಿತಿ ನೀಡಿದ್ದು ಇವರೆಲ್ಲರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್,ಪೋಲಿಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್,ಮಾಲಿನ್ಯ ನಿಯಂತ್ರಣ ಅಧಿಕಾರಿ ವಿಜಯ ಹೆಗ್ಡೆ, ಜಿ.ಪಂ ಸದಸ್ಯೆ ಶಿಲ್ಪಾ ಜಿ ಸುವರ್ಣ, ತಾ.ಪಂ ಸದಸ್ಯೆ ಶಶಿಪ್ರಭಾ ಶೆಟ್ಟಿ, ಮಜೂರು ಗ್ರಾ.ಪಂ ಅಧ್ಯಕ್ಷ ಸಂದೀಪ್ ರಾವ್,ಉಪಾಧ್ಯಕ್ಷೆ ಸಹಾನ ತಂತ್ರಿ,ಜನಜಾಗೃತಿ ಸಮಿತಿ ಸಂಚಾಲಕ ಅರುಣ್ ಶೆಟ್ಟಿ ಪಾದೂರು,ಪೈಯ್ಯಾರು ಶಿವರಾಮ ಶೆಟ್ಟಿ,ಪ್ರವೀಣ್ ಕುಮಾರ್ ಗುರ್ಮೆ,ರಂಗನಾಥ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…