ಉಡುಪಿ : ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಬಸ್ ಚಾಲಕನನ್ನು ಬಸ್ ನಿಂದ ಕಳಗೆ ಇಳಿಸಿ ಪ್ರಯಾಣಿಕರು ತರಾಟೆಗೆ ತೆಗದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್ ನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರಿದ್ದು, ಬಸ್ ಚಾಲಕ ರಸ್ತೆಯುದ್ದಗಲಕ್ಕೂ ಬಸ್ ಚಲಾಯಿಸುತ್ತಿದ್ದ ಎಂದು ಹೇಳಲಾಗಿದ್ದು, ಇದನ್ನು ಗಮನಿಸಿದ ಪ್ರಯಾಣಿಕರು ಬಸ್ ನ್ನು ನಿಲ್ಲಿಸಿ ಬಸ್ ಚಾಲಕನ ತರಾಟೆ ತೆಗೆದುಕೊಂಡಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಪಾನಮತ್ತರಾಗಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಹಿನ್ನಲೆಯಲ್ಲಿ ಬಸ್ ನಿಲ್ಲಿಸಿ ತರಾಟೆ ತೆಗೆದುಕೊಂಡಿದ್ದಾರೆ.
ಆದರೆ ಬಸ್ ಹಾಳಾದ ಹಿನ್ನಲೆಯಲ್ಲಿ ಹೀಗೆ ಬಸ್ ಚಲಾಯಿಸುತ್ತಿರುವುದಾಗಿ ಚಾಲಕ ವಾದ ಮಾಡಿದ್ದು, ಬೇರೆ ವ್ಯವಸ್ಥೆ ಮಾಡುವರೆಗೂ ಸ್ಥಳದಿಂದ ಮುಂದು ಹೋಗುವುದಿಲ್ಲ ಎಂದ ಬಸ್ ಪ್ರಯಾಣಿಕರು ಹಠ ಹಿಡಿದ್ದರು. ಅಲ್ಲದೆ ತಕ್ಷಣ ಹಾಸನ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ನಡುವೆ ಆನಂದ್ ಟ್ರಾವೆಲ್ಸ್ ನವರ ಬೇಜವಾಬ್ದಾರಿ ತನಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನೆ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…