Featured

ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ :  ಲಿಂಕ್ ಮಾಡದಿದ್ದಲ್ಲಿ ನಿಮ್ಮ ಪಾನ್ ನಿಷ್ಕ್ರಿಯ.. Vishwanews24

ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ :  ಲಿಂಕ್ ಮಾಡದಿದ್ದಲ್ಲಿ ನಿಮ್ಮ ಪಾನ್ ನಿಷ್ಕ್ರಿಯ..

ಆಧಾರ್ ಕಾರ್ಡ್  ಅನ್ನು ಪ್ಯಾನ್ ಕಾರ್ಡ್‌ ನೊಂದಿಗೆ ಲಿಂಕ್ ಮಾಡಲು, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ – ಆದಾರ್‌ ಲಿಂಕ್ ಮಾಡಲು 2023ರ ಜೂನ್‌ 30 ಕೊನೆಯ ದಿನವಾಗಿದೆ.

ಜೂ.30 ರ ಒಳಗೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ.

ಈ ದಿನಾಂಕದೊಳಗೆ ಲಿಂಕ್‌ ಮಾಡದಿದ್ದರೆ, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತದೆ.

ಆದಾಯ ತೆರಿಗೆ ಇಲಾಖೆ ಈ ಕುರಿತು ಟ್ವೀಟ್‌ ಮಾಡಿದ್ದು, ಯಾವುದೇ ಕೆಲಸವಿದ್ದರೂ ಜೂನ್ 30 ರ ಮೊದಲು ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡುವಂತೆ ಜನರಿಗೆ ಸಲಹೆ ನೀಡಿದೆ.

ಆದಾಯ ತೆರಿಗೆ ಕಾಯ್ದೆ 1961 ರ ಅಡಿಯಲ್ಲಿ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲ ಪ್ಯಾನ್ ಹೊಂದಿರುವವರು ಜೂನ್ 30 ರೊಳಗೆ ಆಧಾರ್‌ನೊಂದಿಗೆ ಪ್ಯಾನ್‌ ಲಿಂಕ್ ಮಾಡಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಕೊನೆಯ ದಿನಾಂಕದವರೆಗೆ ಕಾಯದೇ ಇಂದೇ ಆಧಾರ್ – ಪ್ಯಾನ್ ಲಿಂಕ್ ಮಾಡಿ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಲಿಂಕ್ ಮಾಡದಿದ್ದಲ್ಲಿ ಪ್ಯಾನ್‌ ನಿಷ್ಕ್ರಿಯ:

ಜೂನ್‌ 30 ರೊಳಗೆ ಆಧಾರ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಂತರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಇದರಿಂದ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಒಂದು ವೇಳೆ ನೀವು ತೆರಿಗೆದಾರರಾಗಿದ್ದು, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾದರೆ, ನಿಮಗೆ ತೆರಿಗೆ ಮರುಪಾವತಿ ನೀಡಲಾಗುವುದಿಲ್ಲ. PAN ನಿಷ್ಕ್ರಿಯವಾಗಿರುವ ಅವಧಿಗೆ ಮರುಪಾವತಿಗೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂತಹ ತೆರಿಗೆದಾರರಿಂದ ಹೆಚ್ಚಿನ TDS ಮತ್ತು TCS ಅನ್ನು ವಿಧಿಸಲಾಗುತ್ತದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago