ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಕೋಪ್ಟಾ -2003 ಕಾಯಿದೆ ಉಲ್ಲಂಘನೆ ವಿರುದ್ದ ನಗರದ ಹೊರವಲಯದ ದೇರಳಕಟ್ಟೆ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ಸ್ಟಾಂಡ್, ರಸ್ತೆ ಬದಿಗಳಲ್ಲಿ, ಅಂಗಡಿ ವಠಾರ ಮತ್ತಿತರ ಸ್ಥಳಗಳಲ್ಲಿ ಹಲವು ಮಂದಿ ಬಹಿರಂಗವಾಗಿಯೇ ಪಾನ್ ಮಸಾಲೆ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನುತ್ತಿದ್ದವರ ವಿರುದ್ಧ ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿಕೊಂಡಿದೆ. ಒಟ್ಟು 32 ಪ್ರಕರಣ ದಾಖಲಿಸಿ ರೂ. 3100 ದಂಡ ವಿಧಿಸಲಾಯಿತು.
ಇದೇ ಸಂದರ್ಭದಲ್ಲಿ ಕೋಪ್ಟಾ ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನದಂತೆ ಗ್ರಾಹಕರಿಗೆ ಸೂಚಿಸಲು ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು. ಅಲ್ಲದೇ, ಈ ಕುರಿತು ಸಹಕರಿಸದಿದ್ದರೆ, ಕಾಯಿದೆಯನ್ವಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಅಧಿಕವಾಗಿದೆ. ಪ್ರಸಕ್ತ ಕೋವಿಡ್ ವ್ಯಾಪಕವಾಗಿರುವುದರಿಂದ ಈ ರೀತಿ ಪಾನ್ ಮಸಾಲೆ ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚು ಅಪಾಯಕಾರಿಯಾಗಿದೆ. ಇಂತಹ ಉಗುಳನ್ನು ಇತರ ಸಾರ್ವಜನಿಕರಿಗೆ ನಡೆದುಕೊಂಡು ಹೋಗುವಾಗ ಗೊತ್ತಿಲ್ಲದೇ ಮೆಟ್ಟುವುದರಿಂದ ಇದು ಸಾಂಕ್ರಾಮಿಕ ರೋಗ ಹಬ್ಬಲೂ ಕಾರಣವಾಗುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ಕೋಣಾಜೆ ಠಾಣಾ ಪೊಲೀಸ್ ಉಪ ನಿರೀಕ್ಷಕ ಶರಣಪ್ಪ , ಸಿಬ್ಬಂದಿ ಪುನೀತ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.
ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆಹಾರ ಸುರಕ್ಷತಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…