Featured

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ

ಬೆಂಗಳೂರು: ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಬುಧವಾರ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ವಿವಿಧೆಡೆ ಕಾರ್ಯಾಚರಣೆ ನಡೆಸಿ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಪ್ರಮುಖವಾಗಿ, ಬೆಂಗಳೂರು, ಮೈಸೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಪಾನ್ ಮಸಾಲಾ ಮಾರಾಟ ಮಳಿಗೆಗಳಿಂದ ಮಾದರಿ ಸಂಗ್ರಹಿಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಪೈಕಿ ಬುಧವಾರ ಕೆಲವು ಮಳಿಗೆಗಳಿಂದ 32 ಸ್ಯಾಂಪಲ್ಸ್ ಸಂಗ್ರಹಿಸಿದ್ದು, ಗುರುವಾರವೂ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಗಳಿವೆ.

ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು, ‘ಪಾನ್ ಮಸಾಲಾ, ಗುಟ್ಕಾ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಶೀಘ್ರ ಇದನ್ನು ಪರಿಶೀಲಿಸುತ್ತೇವೆ. ಈ ಸಂಗತಿ ನಿಜವಾದರೆ, ಕೂಡಲೇ ನಿಲ್ಲದಿದ್ದರೆ, ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಅದರ ಬೆನ್ನಲ್ಲೇ ಇಲಾಖೆಯು ಚುರುಕು ಕಾರ್ಯಾಚರಣೆ ಕೈಗೊಂಡಿದೆ.

 

ಜ್ಞಾಪನ ಪತ್ರ ಹೊರಡಿಸಿದ್ದ ಆಯುಕ್ತರು: ರಾಜ್ಯಾದ್ಯಂತ ಮಾರಾಟ ಮಾಡಲಾಗುವ ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಜೂ.30 ಮತ್ತು ಜು.1ರಂದು ವಿಶೇಷ ಆಂದೋಲನ ಕೈಗೊಳ್ಳುವ ಮುಖಾಂತರ ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಬೇಕು. ಅವುಗಳ ವಿಶ್ಲೇಷಣೆಗಾಗಿ ತಮ್ಮ ವಿಭಾಗಕ್ಕೆ ಸಂಬಂಧಿಸಿದ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ (ರಾಜ್ಯ ಮತ್ತು ವಿಭಾಗೀಯ ಆಹಾರ ಪ್ರಯೋಗಾಲಯ) ವಿಶ್ಲೇಷಣೆಗಾಗಿ ಕಳುಹಿಸಬೇಕು.

ಅಲ್ಲದೆ, ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಸಗಟು ಮಳಿಗೆಗಳಿಗೆ ಪರಿಶೀಲನಾ ಭೇಟಿ ನೀಡಿ ತಪಾಸಣೆ ಕೈಗೊಳ್ಳಬೇಕು. ಆಹಾರ ಮಾದರಿಯ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನೊಂದಿಗೆ ದಾಖಲಿಸಬೇಕು. ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಆಯಾ ಜಿಲ್ಲಾ ಅಂಕಿತಾಧಿಕಾರಿಗಳು ನಡೆಸಿ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ಜೂ.29ರಂದು ಜ್ಞಾಪನ ಪತ್ರ ಹೊರಡಿಸಿದ್ದರು.

Vishwa News 24

Recent Posts

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

3 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

10 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

35 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

48 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

1 hour ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

1 hour ago