ಮುಂಬೈ: ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಇತ್ತೀಚೆಗೆ ಪಾನ್ ಮಸಾಲಾ ಬ್ರ್ಯಾಂಡ್ ಅಂಬಾಸಿಡರ್ ಆಗುತ್ತಿರುವುದರ ಬಗ್ಗೆ ಭಾರೀ ಟ್ರೋಲ್ ಆಗಿದ್ದರು. ಹಲವು ದಿನಗಳಿಂದ ಅಕ್ಷಯ್ ಅಭಿಮಾನಿಗಳು ಅವರ ಈ ನಡೆಗೆ ಬೇಸರ ವ್ಯಕ್ತಪಡಿಸಿದ್ದರಿಂದ ಇದೀಗ ಅಕ್ಷಯ್ ಬ್ರ್ಯಾಂಡ್ ಅಂಬಾಸಿಡರ್ ಪಟ್ಟವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ.
ಪಾನ್ ಮಸಾಲಾ ಬ್ರಾಂಡ್ ಒಂದರ ಜಾಹಿರಾತಿಗಾಗಿ ಬಾಲಿವುಡ್ ತಾರೆಗಳಾದ ಶಾರೂಖ್ ಖಾನ್, ಅಜಯ್ ದೇವಗನ್ ಹಾಗೂ ಅಕ್ಷಯ್ ಕುಮಾರ್ ಕೆಲಸ ಮಾಡುತ್ತಿದ್ದರು. ಆದರೆ ಇದರಿಂದ ಅಕ್ಷಯ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಅಕ್ಷಯ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ.
ಏಪ್ರಿಲ್ 21ರ ಮಧ್ಯರಾತ್ರಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ ಅಕ್ಷಯ್, ನನ್ನನ್ನು ಕ್ಷಮಿಸಿ, ನನ್ನ ಎಲ್ಲಾ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ನಾನು ಕ್ಷಮೆ ಯಾಚಿಸಲು ಬಯಸುತ್ತೇನೆ. ಕಳೆದ ಕೆಲವು ದಿನಗಳಿಂದ ನಿಮ್ಮ ಪ್ರತಿಕ್ರಿಯೆಗಳು ನನ್ನ ಮೇಲೆ ಗಾಢ ಪರಿಣಾಮ ಬೀರಿದೆ. ನಾನು ತಂಬಾಕನ್ನು ಅನುಮೋದಿಸಿಲ್ಲ ಹಾಗೂ ಅನುಮೋದಿಸುವುದಿಲ್ಲ. ಆದರೆ ನಾನು ಗೌರವಿಸುತ್ತೇನೆ. ವಿಮಲ್ ಎಲೈಚಿ ಅವರೊಂದಿಗೆ ನನ್ನ ಒಡನಾಟ ನಿಮ್ಮ ಭಾವನೆಗಳಿಗೆ ನೋವುಂಟು ಮಾಡಿರುವುದು ನನಗೆ ತಿಳಿದಿದೆ. ಹೀಗಾಗಿ ನಾನು ಇದರಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಬರೆದಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…