ಮುಂಬೈ: ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಇತ್ತೀಚೆಗೆ ಪಾನ್ ಮಸಾಲಾ ಬ್ರ್ಯಾಂಡ್ ಅಂಬಾಸಿಡರ್ ಆಗುತ್ತಿರುವುದರ ಬಗ್ಗೆ ಭಾರೀ ಟ್ರೋಲ್ ಆಗಿದ್ದರು. ಹಲವು ದಿನಗಳಿಂದ ಅಕ್ಷಯ್ ಅಭಿಮಾನಿಗಳು ಅವರ ಈ ನಡೆಗೆ ಬೇಸರ ವ್ಯಕ್ತಪಡಿಸಿದ್ದರಿಂದ ಇದೀಗ ಅಕ್ಷಯ್ ಬ್ರ್ಯಾಂಡ್ ಅಂಬಾಸಿಡರ್ ಪಟ್ಟವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ.
ಪಾನ್ ಮಸಾಲಾ ಬ್ರಾಂಡ್ ಒಂದರ ಜಾಹಿರಾತಿಗಾಗಿ ಬಾಲಿವುಡ್ ತಾರೆಗಳಾದ ಶಾರೂಖ್ ಖಾನ್, ಅಜಯ್ ದೇವಗನ್ ಹಾಗೂ ಅಕ್ಷಯ್ ಕುಮಾರ್ ಕೆಲಸ ಮಾಡುತ್ತಿದ್ದರು. ಆದರೆ ಇದರಿಂದ ಅಕ್ಷಯ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಅಕ್ಷಯ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ.
ಏಪ್ರಿಲ್ 21ರ ಮಧ್ಯರಾತ್ರಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ ಅಕ್ಷಯ್, ನನ್ನನ್ನು ಕ್ಷಮಿಸಿ, ನನ್ನ ಎಲ್ಲಾ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ನಾನು ಕ್ಷಮೆ ಯಾಚಿಸಲು ಬಯಸುತ್ತೇನೆ. ಕಳೆದ ಕೆಲವು ದಿನಗಳಿಂದ ನಿಮ್ಮ ಪ್ರತಿಕ್ರಿಯೆಗಳು ನನ್ನ ಮೇಲೆ ಗಾಢ ಪರಿಣಾಮ ಬೀರಿದೆ. ನಾನು ತಂಬಾಕನ್ನು ಅನುಮೋದಿಸಿಲ್ಲ ಹಾಗೂ ಅನುಮೋದಿಸುವುದಿಲ್ಲ. ಆದರೆ ನಾನು ಗೌರವಿಸುತ್ತೇನೆ. ವಿಮಲ್ ಎಲೈಚಿ ಅವರೊಂದಿಗೆ ನನ್ನ ಒಡನಾಟ ನಿಮ್ಮ ಭಾವನೆಗಳಿಗೆ ನೋವುಂಟು ಮಾಡಿರುವುದು ನನಗೆ ತಿಳಿದಿದೆ. ಹೀಗಾಗಿ ನಾನು ಇದರಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಬರೆದಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…