Featured

ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ – Vishwanews24

ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ – Vishwanews24

ಚೆನ್ನೈ: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಯೋಧರ ಮೃತದೇಹಗಳನ್ನು ಮದ್ರಾಸ್ ರೆಜಿಮೆಂಟಲ್ ಸೆಂಟರ್ (ಎಂಆರ್‌ಸಿ) ಕುನ್ನೂರಿನ ವೆಲ್ಲಿಂಗ್‌ಟನ್‌ನಿಂದ ಸುಲೂರ್ ಏರ್ ಬೇಸ್‌ಗೆ ಕೊಂಡೊಯ್ಯಲಾಗುತ್ತಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್‌ ಮಾರ್ಗಮಧ್ಯೆ ಅಪಘಾತವಾಗಿದೆ. ಈ ದುರಂತದಲ್ಲಿ ಪೊಲೀಸರ ಇಲಾಖೆಯ ಕೆಲ ಸಿಬ್ಬಂದಿಗೆ ಗಾಯವಾಗಿದೆ. ಸೂಲೂರು ವಾಯುನೆಲೆಯಿಂದ ಸುಮಾರು 45 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ.

ಸಿಡಿಎಸ್ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ದೆಹಲಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಕಾಮರಾಜ ಮಾರ್ಗದಿಂದ ಬೇರಾರ್ ಕ್ರಾಸ್‌ವರೆಗೆ ಅಂತ್ಯಕ್ರಿಯೆ ನಡೆಸಲಾಗುವುದು. ದೆಹಲಿ ಕಂಟೋನ್ಮೆಂಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಆಂಬ್ಯುಲೆನ್ಸ್ ವಿಮಾನ ನಿಲ್ದಾಣದತ್ತ ಸಾಗುತ್ತಿದ್ದಾಗ ದಾರಿಯಲ್ಲಿ ನಿಂತಿದ್ದ ಜನರು ಪುಷ್ಪವೃಷ್ಟಿ ಮಾಡುವ ಮೂಲಕ ನಾಡಿನ ವೀರಯೋಧನಿಗೆ ಅಂತಿಮ ವಿದಾಯ ಹೇಳಿದರು. ಎಲ್ಲಾ 13 ಮೃತದೇಹಗಳನ್ನು ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸೂಲೂರಿನಿಂದ ದೆಹಲಿಗೆ ಹಾರಿಸಲಾಯಿತು. ಆಗಲೇ ವಾಯುಪಡೆ ಮುಖ್ಯಸ್ಥರು ಅಲ್ಲಿಂದ ದೆಹಲಿಗೆ ಹೊರಟಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago