Featured

ಪಾಳು ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಪ್ರಕರಣ : ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ – Vishwanews24

ಪಾಳು ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಪ್ರಕರಣ : ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ

ಚಿತ್ರದುರ್ಗ: ಪಾಳು ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದ ಎಫ್ಎಸ್ಎಲ್ ವರದಿ ಬಂದಿದ್ದು, ಐವರೂ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಂಶ ಪತ್ತೆಯಾಗಿರುತ್ತದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಈ ಚಿತ್ರದುರ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾ‌ರ್ ಮೀನಾ ಅವರು, ಐವರ ಸಾವಿಗೆ ಅತಿಯಾದ ನಿದ್ರೆ ಮಾತ್ರೆ ಸೇವನೆಯೇ ಕಾರಣ ಎಂಬುದಾಗಿ ವರದಿ ತಿಳಿಸಿದೆ. ಕಳೆದ ಡಿ.28ರಂದು ಚಿತ್ರದುರ್ಗ ಕಾರಾಗೃಹ ರಸ್ತೆಯ ಪಾಳು ಮನೆಯಲ್ಲಿ ಐದು ಅಸ್ಥಿಪಂಜರಗಳು ಕಂಡುಬಂದಿದ್ದವು. ದಾವಣಗೆರೆ, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ 71 ಸಾಕ್ಷ್ಯ ಸಂಗ್ರಹ ಮಾಡಿದ್ದರು. ಅಡುಗೆ ಪಾತ್ರೆಯಲ್ಲಿ ಸಯನೈಡ್ ಅಂಶವಿರುದು ಕಂಡುಬಂದಿದೆ. ಪಾತ್ರೆಯಲ್ಲಿ ಇದ್ದ ಈ ಆಹಾರವನ್ನು ಸೇವಿಸಿರುವ ಖಚಿತತೆ ಇಲ್ಲ ಎಂದು ತಿಳಿಸಿದರು.

ಐವರ ಸಾವಿಗೆ ಕಾರಣ ತಿಳಿದುಕೊಳ್ಳುವ ಉದ್ದೇಶದಿಂದ ಎಲ್ಲಾ ಆಯಾಮದಲ್ಲೂ ಪರೀಕ್ಷೆ ನಡೆಸಲಾಯಿತು. ಆಗ ಐವರ ಅಸ್ಥಿಪಂಜರದಲ್ಲೂ ನಿದ್ರೆ ಮಾತ್ರೆಯ ಅಂಶವಿರುವುದು ಪತ್ತೆಯಾಗಿದೆ. ಗಾಯದಿಂದ ಮೃತಪಟ್ಟಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಹೇಳಿದರು.

ಕೆಲವು ವಸ್ತುಗಳು ಯಾವುದೇ ಸಾಕ್ಷ್ಯವನ್ನು ಒದಗಿಸದಷ್ಟು ಹಾಳಾಗಿದ್ದವು. ಸ್ಥಳದಲ್ಲಿ ಕೆಲ ಔಷಧದ ಚೀಟಿ, ವೈದ್ಯಕೀಯ ವರದಿಗಳು ಪತ್ತೆಯಾಗಿದ್ದವು. ಇವುಗಳ ಆಧಾರದಲ್ಲಿ ಐವರೂ ದೈಹಿಕ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮಾನಸಿಕ ಸಮಸ್ಯೆಯಿಂದ ಪಡೆಯುತ್ತಿದ್ದ ಚಿಕಿತ್ಸೆ, ಸೇವಿಸುತ್ತಿದ್ದ ಔಷಧದ ಅಂಶಗಳನ್ನು ಪರೀಕ್ಷಿಸಲಾಗಿದೆ ಎಂದರು.

ಮನೆಯಲ್ಲಿ ದೊರೆತ ಔಷಧ ಚೀಟಿಯ ಹಿಂಬದಿಯಲ್ಲಿ ಬರೆದ ಅಪೂರ್ಣ ಪತ್ರವನ್ನು ಆಧರಿಸಿ ಬೆಂಗಳೂರಿನ ವ್ಯಕ್ತಿಯನ್ನು ವಿಚಾರಣೆ ನಡೆಸಲಾಯಿತು. ಆದರೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಕಾಗದದಲ್ಲಿರುವ ಬರಹ ಸಾವಿಗೂ ಮುನ್ನ ಬರೆದ ಪತ್ರವೇ ಎಂಬುದೂ ಖಚಿತವಾಗಿಲ್ಲ. ಇದರೊಂದಿಗೆ ಕೈಬರಹ ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಸಾಂದರ್ಭಿಕ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ತಿಳಿಸಿದರು

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago