ಪಾವಗಡ ಬಸ್ ದುರಂತ ಪ್ರಕರಣ: ಖಾಸಗಿ ಬಸ್ಗಳ ಪರವಾನಗಿ ರದ್ದು: ಸಚಿವ ಶ್ರೀರಾಮುಲು – Vishwanews24
ಪಾವಗಡ ಬಸ್ ದುರಂತ ಪ್ರಕರಣ: ಖಾಸಗಿ ಬಸ್ಗಳ ಪರವಾನಗಿ ರದ್ದು: ಸಚಿವ ಶ್ರೀರಾಮುಲು – Vishwanews24
ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಎಂಟು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾವಗಡದಲ್ಲಿ ಖಾಸಗಿ ಬಸ್ಗಳ ಪರವಾನಗಿ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾವಗಡದಲ್ಲಿ ಖಾಸಗಿ ಬಸ್ ಗಳ ಪರವಾನಗಿಯನ್ನ ರದ್ದು ಮಾಡಲು ಸೂಚನೆ ನೀಡಿದ್ದು, ಇಲ್ಲಿ ಸಾರಿಗೆ ಬಸ್ ಓಡಿಸಲು ಕ್ರಮ ಕೈಗೊಳ್ಳುತ್ತೇವೆ. ಆರ್ಟಿಒ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡುತ್ತೇವೆ ಎಂದರು.
ಇನ್ನು ಇಂದು ನಡೆದ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ಕೊಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರು : ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ : ಸಿದ್ದರಾಮಯ್ಯ – Vishwanews24
