ಉಡುಪಿ: ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅಥವಾ ವಾಸ್ತವತೆ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಉಡುಪಿ ಡಿ.ಸಿ. ಮತ್ತೊಮ್ಮೆ ವಾರ್ನಿಂಗ್ ಕೊಟ್ಟಿದ್ದಾರೆ.
ಈ ಸಂಬಂಧ ಜಿಲ್ಲೆಯ ಜನತೆಗೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ , ಪಾಸಿಟಿವ್ ಬಂದವರಿಗೆ ಕಂಟ್ರೋಲ್ ರೂಂನಿಂದ ಫೋನ್ ಮಾಡುತ್ತೇವೆ. ಆ ಸಂದರ್ಭದಲ್ಲಿ ಕೆಲವರು ಸರಿಯಾಗಿ ಸ್ಪಂದಿಸದಿರುವುದು ಕಂಡುಬಂದಿದೆ. ಮಾಹಿತಿ ನೀಡದೇ ಇರುವುದು ಅಥವಾ ಆರೋಗ್ಯ ಕಾರ್ಯಕರ್ತರ ಜೊತೆ ಉಡಾಫೆ ವರ್ತನೆ ತೋರುತ್ತಾರೆ.
ಈ ರೀತಿ ಮಾಡಿದರೆ ಕಾಯಿಲೆ ನಿಯಂತ್ರಣ ಕಷ್ಟವಾಗುತ್ತದೆ. ಹಾಗಾಗಿ ಜಿಲ್ಲಾಡಳಿತದ ಜೊತೆ ಸೂಕ್ತ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಇನ್ನು ಪಾಸಿಟಿವ್ ಬಂದ ಕೆಲವು ವ್ಯಕ್ತಿಗಳು ಪ್ರೈಮರಿ ಸಂಪರ್ಕದ ಬಗ್ಗೆ ಸರಿಯಾದ, ಖಚಿತ ಮಾಹಿತಿ ನೀಡುತ್ತಿಲ್ಲ.
ನಿಮಗೆ ಗೊತ್ತಿರಲಿ, ಪ್ರೈಮರಿ ಕಾಂಟಾಕ್ಟ್ ಇರುವ ಶೇ.50 ಜನರಿಗೆ ಪಾಸಿಟಿವ್ ಬರುತ್ತದೆ. ಆದರೆ ಮಾಹಿತಿ ಮುಚ್ಚಿಟ್ಟರೆ ಅವರು ಇತರರಿಗೂ ಕಾಯಿಲೆ ಹರಡಿಸುತ್ತಾರೆ. ಹೀಗಾಗಿ ಮಾಹಿತಿ ನೀಡದವರ ಅಥವಾ ವಾಸ್ತವ ಅಂಶ ಮುಚ್ಚಿಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…