ಉಡುಪಿ

ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು : ಉಡುಪಿ ಡಿ.ಸಿ ಎಚ್ಚರಿಕೆ -Vishwanews24

ಉಡುಪಿ: ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅಥವಾ ವಾಸ್ತವತೆ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಉಡುಪಿ ಡಿ.ಸಿ. ಮತ್ತೊಮ್ಮೆ ವಾರ್ನಿಂಗ್ ಕೊಟ್ಟಿದ್ದಾರೆ.

ಈ ಸಂಬಂಧ ಜಿಲ್ಲೆಯ ಜನತೆಗೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ , ಪಾಸಿಟಿವ್ ಬಂದವರಿಗೆ ಕಂಟ್ರೋಲ್ ರೂಂನಿಂದ ಫೋನ್ ಮಾಡುತ್ತೇವೆ. ಆ ಸಂದರ್ಭದಲ್ಲಿ ಕೆಲವರು ಸರಿಯಾಗಿ ಸ್ಪಂದಿಸದಿರುವುದು ಕಂಡುಬಂದಿದೆ. ಮಾಹಿತಿ ನೀಡದೇ ಇರುವುದು ಅಥವಾ ಆರೋಗ್ಯ ಕಾರ್ಯಕರ್ತರ ಜೊತೆ ಉಡಾಫೆ ವರ್ತನೆ ತೋರುತ್ತಾರೆ.

ಈ ರೀತಿ ಮಾಡಿದರೆ ಕಾಯಿಲೆ ನಿಯಂತ್ರಣ ಕಷ್ಟವಾಗುತ್ತದೆ. ಹಾಗಾಗಿ ಜಿಲ್ಲಾಡಳಿತದ ಜೊತೆ ಸೂಕ್ತ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಇನ್ನು ಪಾಸಿಟಿವ್ ಬಂದ ಕೆಲವು ವ್ಯಕ್ತಿಗಳು ಪ್ರೈಮರಿ ಸಂಪರ್ಕದ ಬಗ್ಗೆ ಸರಿಯಾದ, ಖಚಿತ ಮಾಹಿತಿ ನೀಡುತ್ತಿಲ್ಲ.

ನಿಮಗೆ ಗೊತ್ತಿರಲಿ, ಪ್ರೈಮರಿ ಕಾಂಟಾಕ್ಟ್ ಇರುವ ಶೇ.50 ಜನರಿಗೆ ಪಾಸಿಟಿವ್ ಬರುತ್ತದೆ. ಆದರೆ ಮಾಹಿತಿ‌ ಮುಚ್ಚಿಟ್ಟರೆ ಅವರು ಇತರರಿಗೂ ಕಾಯಿಲೆ ಹರಡಿಸುತ್ತಾರೆ. ಹೀಗಾಗಿ ಮಾಹಿತಿ ನೀಡದವರ ಅಥವಾ ವಾಸ್ತವ ಅಂಶ ಮುಚ್ಚಿಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago