Featured

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ

ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಸ್‌ಪೋರ್ಟ್ ಶುಲ್ಕವನ್ನ ಹೆಚ್ಚಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಇನ್ನು ಈ ಹೊಸ ದರ ಜುಲೈ 1 ರಿಂದ ಜಾರಿಯಾಗಲಿದೆ.

ಪ್ರಮಾಣಿತ ಅಂದ್ರೆ ಸಾಮಾನ್ಯ ಪಾಸ್‌ಪೋರ್ಟ್ ಪಡೆಯುವ ಶುಲ್ಕ 2,500 ರೂ.ಗಳಿಗೆ ಹಾಗೂ ತತ್ಕಾಲ್ ಯೋಜನೆ ಅಡಿಯಲ್ಲಿ ಪಾಸ್‌ಪೋರ್ಟ್ ಪಡೆಯುವ ಶುಲ್ಕವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಹೊಸ ದರಗಳ ಅಡಿಯಲ್ಲಿ 18 ಅಥವಾ 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಅರ್ಜಿದಾರರಿಗೆ 36 ಪುಟಗಳ ಪಾಸ್‌ಪೋರ್ಟ್ ಶುಲ್ಕವನ್ನ 1,500 ರೂ.ನಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ. ತತ್ಕಾಲ್ ಶುಲ್ಕವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಏರಿಕೆ ಮಾಡಲಾಗಿದೆ.

ಅದೇ ರೀತಿ, 60 ಪುಟಗಳ ಪಾಸ್‌ಪೋರ್ಟ್‌ನ ಶುಲ್ಕವನ್ನು ಸಾಮಾನ್ಯ ವರ್ಗದ ಅಡಿಯಲ್ಲಿ 2,000 ರೂ.ಗಳಿಂದ 3,500 ರೂ.ಗಳಿಗೆ ಮತ್ತು ತತ್ಕಾಲ್ ಅಡಿಯಲ್ಲಿ 6,000 ರೂ.ಗಳಿಗೆ ಕೇಂದ್ರ ಹೆಚ್ಚಿಸಿದೆ.

ಕಳೆದುಹೋದ ಅಥವಾ ಹಾನಿಗೊಳಗಾದ ಪಾಸ್‌ಪೋರ್ಟ್ ಬದಲಿಸಲು (36 ಪುಟ) 5,000 ರೂ., ತತ್ಕಾಲ್‌ನಲ್ಲಿ 7,500 ರೂ. ಶುಲ್ಕ ಪಾವತಿಸಬೇಕಾಗುತ್ತದೆ. 60 ಪುಟಗಳ ಬದಲಿ ಪಾಸ್‌ಪೋರ್ಟ್‌ಗೆ ಸಾಮಾನ್ಯಕ್ಕೆ 6,000 ರೂ. ಹಾಗೂ ತತ್ಕಾಲ್‌ನಲ್ಲಿ 8,500 ರೂ. ಪಾವತಿ ಮಾಡಬೇಕಾಗುತ್ತದೆ.

ಇನ್ನೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅರ್ಜಿದಾರರಿಗೆ 36 ಪುಟಗಳ ಹೊಸ ಅಥವಾ ಮರು ಪಾಸ್‌ಪೋರ್ಟ್‌ಗೆ ಸಾಮಾನ್ಯ ಯೋಜನೆ ಅಡಿಯಲ್ಲಿ 1,750 ರೂ. ಹಾಗೂ ತತ್ಕಾಲ್ ಅಡಿಯಲ್ಲಿ 4,250 ರೂ. ಶುಲ್ಕವಾಗಲಿದೆ. ಜೊತೆಗೆ ಅಪ್ರಾಪ್ತ ವಯಸ್ಕರು ಕಳೆದುಹೋದ ಅಥವಾ ಹಾನಿಗೊಳಗಾದ ಪಾಸ್‌ಪೋರ್ಟ್ ಬದಲಾಯಿಸಲು ಸಾಮಾನ್ಯ ಯೋಜನೆ ಅಡಿ 4,250 ರೂ. ಹಾಗೂ ತತ್ಕಾಲ್ ಅಡಿಯಲ್ಲಿ 6,750 ರೂ. ನಿಗದಿಪಡಿಸಲಾಗಿದೆ.

ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರಗಳು, ಶರಣಾಗತಿ ಪ್ರಮಾಣಪತ್ರಗಳು, ವಿದೇಶಿ ಕಾರ್ಯಕ್ರಮದ ಪರಿಶೀಲನೆ ಮತ್ತು ಇತರ ವಿವಿಧ ಪಾಸ್‌ಪೋರ್ಟ್-ಸಂಬಂಧಿತ ಪ್ರಮಾಣಪತ್ರಗಳ ಶುಲ್ಕವನ್ನ ಭಾರತದಲ್ಲಿ 750 ರೂ. ಮತ್ತು ವಿದೇಶದಲ್ಲಿ 40 ಡಾಲರ್‌ಗಳಿಗೆ ನಿಗದಿಪಡಿಸಲಾಗಿದೆ.

Vishwa News 24

Recent Posts

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

5 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

12 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

35 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

51 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

1 hour ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

2 hours ago