Featured

ಪಿಂಕ್ ವಾಟ್ಸ್​ಆ್ಯಪ್ – ತಪ್ಪಿಯೂ ಲಿಂಕ್ ಮೇಲೆ ಕ್ಲಿಕ್ ಮಾಡಬೇಡಿ ಎಚ್ಚರ.!

ಪಿಂಕ್ ವಾಟ್ಸ್​ಆ್ಯಪ್ – ತಪ್ಪಿಯೂ ಲಿಂಕ್ ಮೇಲೆ ಕ್ಲಿಕ್ ಮಾಡಬೇಡಿ ಎಚ್ಚರ.!

ನೀವು ಈಗಾಗಲೇ ಪಿಂಕ್ ವಾಟ್ಸ್​ಆ್ಯಪ್ ಡೌನ್‌ಲೋಡ್ ಮಾಡಿದ್ದೀರ?

ಮುಂಬೈ: ಪಿಂಕ್ ವಾಟ್ಸ್​ಆ್ಯಪ್ ಸ್ಕ್ಯಾಮ್‌ ಬಗ್ಗೆ ಬಳಕೆದಾರರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಪಿಂಕ್ ವಾಟ್ಸ್​ಆ್ಯಪ್ ಮತ್ತೆ ಕಾಣಿಸಿಕೊಂಡಿದ್ದು, ಕೆಲವು ದಿನಗಳಿಂದ ಅನೇಕರಿಗೆ ವಾಟ್ಸ್​ಆ್ಯಪ್ ಅಪ್‌ಡೇಟ್‌ ಹೆಸರಿನಲ್ಲಿ ಫಾರ್ವರ್ಡ್‌ ಮೆಸೇಜ್‌ ಹರಿದಾಡುತ್ತಿದೆ.

ಇದು ವಾಟ್ಸ್​ಆ್ಯಪ್​ನ ಹೊಸ ಆವೃತ್ತಿ, ಇದರಲ್ಲಿ ಅನೇಕ ವಿಶೇಷ ಫೀಚರ್​ಗಳಿವೆಕೂಡಲೇ ಡೌನ್​ಲೋಡ್ ಮಾಡಿ” ಎಂಬ ಮೆಸೇಜ್ ಕೂಡ ಇರುತ್ತದೆ. ಇದನ್ನು ನಂಬಿ ಕ್ಲಿಕ್ ಮಾಡಿದಾಗ ಇದರಲಿದ್ದ ಇನ್ಸ್‌ಸ್ಟಾಲೇಷನ್‌ ಲಿಂಕ್‌ ಇದ್ದು, ಅದನ್ನು ಒತ್ತಿದ ಕೂಡಲೇ ವೈರಸ್ ಕಾಣಿಸಿಕೊಂಡು ಹ್ಯಾಕ್ ಆಗಲಿದೆ.

ಬಳಕೆದಾರರ ಒಟಿಪಿ, ಸಂಪರ್ಕ ಸಂಖ್ಯೆ, ಫೋಟೊ, ಬ್ಯಂಕ್‌ ಮಾಹಿತಿ ಸೇರಿದಂತೆ ಮೊಬೈಲ್‌ನಲ್ಲಿರುವ ಎಲ್ಲ ಡೇಟಾ ಹ್ಯಾಕ್‌ ಆಗಲಿದೆ. ಹೀಗಾಗಿ, ಯೂಸರ್‌ ವಾಟ್ಸಾಪ್‌ ಲಿಂಕ್‌ ಸ್ಕ್ಯಾಮ್‌ ಬಗ್ಗೆ ಜಾಗೃತರಾಗಿರಬೇಕೆಂದು ತಜ್ಞರು ಎಚ್ಚರಿಸಿದ್ದಾರೆ.

ನೀವು ಈಗಾಗಲೇ ಪಿಂಕ್ ವಾಟ್ಸ್​ಆ್ಯಪ್ ಡೌನ್‌ಲೋಡ್ ಮಾಡಿದ್ದೀರ?:

ನೀವು ಈಗಾಗಲೇ ಪಿಂಕ್ ವಾಟ್ಸ್​ಆ್ಯಪ್ ಡೌನ್‌ಲೋಡ್ ಮಾಡಿದ್ದರೆ ಅದನ್ನು ತಕ್ಷಣವೇ ಅನ್​ಇನ್​ಸ್ಟಾಲ್ ಮಾಡುವಂತೆ ಮುಂಬೈ ಪೊಲೀಸರು ಬಳಕೆದಾರರನ್ನು ಒತ್ತಾಯಿಸಿದ್ದಾರೆ. ಅಧಿಕೃತ ಆ್ಯಪ್​ ಸ್ಟೋರ್ ಆಗಿರುವ ಗೂಗಲ್​ ಪ್ಲೇ ಸ್ಟೋರ್ ಅಥವಾ ಆ್ಯಪಲ್​ ಆ್ಯಪ್​ಸ್ಟೋರ್​ಗಳಲ್ಲಿ ಇರುವ ಆ್ಯಪ್​ಗಳನ್ನು ಮಾತ್ರ ಡೌನ್​ಲೋಡ್ ಮಾಡಿಕೊಳ್ಳಬೇಕು. ಉಳಿದಂತೆ ಯಾವುದೇ ಲಿಂಕ್ ಮೂಲಕ ಹೋಗಿ ಆ್ಯಪ್​ಗಳನ್ನು ಡೌನ್​​ಲೋಡ್ ಮಾಡಿಕೊಳ್ಳಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪಿಂಕ್ ವಾಟ್ಸ್​ಆ್ಯಪ್ ಹಗರಣ ಎಂದರೇನು?:

ಮುಂಬೈ ಪೊಲೀಸರ ಪ್ರಕಾರ, ”ಪಿಂಕ್ ವಾಟ್ಸ್​ಆ್ಯಪ್​ನಲ್ಲಿ ಹಲವು ರೀತಿಯ ವೈಶಿಷ್ಟ್ಯಗಳಿವೆ ಎಂಬ ಸಂದೇಶಗಳೊಂದಿಗೆ ನಕಲಿ ಲಿಂಕ್​ವೊಂದು ವಾಟ್ಸ್​ಆ್ಯಪ್​ಗೆ ಬರುತ್ತಿದೆ. ಇದು ಹೆಚ್ಚಾಗಿ ಗ್ರೂಪ್​ಗಳಲ್ಲಿ ಬರುತ್ತಿದ್ದು, ಸಹಜವೆಂಬಂತೇ ಜನರು ಕ್ಲಿಕ್​ ಮಾಡಿ ಪೇಚಿಗೆ ಸಿಲುಕುತ್ತಿದ್ದಾರೆ. ಇದು ಫಿಶಿಂಗ್ ಲಿಂಕ್ ಆಗಿದ್ದು, ಬಳಕೆದಾರರು ತಮ್ಮ ಮೊಬೈಲ್ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಕೆಲವೇ ಸೆಕೆಂಡುಗಳಲ್ಲಿ ಮೊಬೈಲ್ ಕೂಡ ಹ್ಯಾಕ್ ಆಗುತ್ತಿದೆ. ಇದರಿಂದಾಗಿ ಎಲ್ಲಾ ಮೊಬೈಲ್ ಡೇಟಾ ಹ್ಯಾಕರ್​ಗಳ ಕೈ ಸೇರುತ್ತಿದೆ. ಇದಕ್ಕೆ ನೀವು ಯಾವುದೇ ರೀತಿಯ OTP ಅನ್ನು ಪಡೆಯುವುದಿಲ್ಲ. ವಂಚಕರು ಈ ಮೂಲಕ ಫೋನ್ ಡೇಟಾವನ್ನು ಸುಲಭವಾಗಿ ಪ್ರವೇಶಿಸಬಹುದು. ನಂತರ ನಿಮ್ಮ ವೈಯಕ್ತಿಕ ವಿಡಿಯೋ, ಫೋಟೋ, ಬ್ಯಾಂಕ್ ಖಾತೆ ಎಲ್ಲ ಮಾಹಿತಿ ದೋಚುತ್ತಾರೆ,” ಎಂದು ಹೇಳಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago