Featured

ಪಿಂಕ್ ವಾಟ್ಸ್​ಆ್ಯಪ್ – ತಪ್ಪಿಯೂ ಲಿಂಕ್ ಮೇಲೆ ಕ್ಲಿಕ್ ಮಾಡಬೇಡಿ ಎಚ್ಚರ.!

ಪಿಂಕ್ ವಾಟ್ಸ್​ಆ್ಯಪ್ – ತಪ್ಪಿಯೂ ಲಿಂಕ್ ಮೇಲೆ ಕ್ಲಿಕ್ ಮಾಡಬೇಡಿ ಎಚ್ಚರ.!

ನೀವು ಈಗಾಗಲೇ ಪಿಂಕ್ ವಾಟ್ಸ್​ಆ್ಯಪ್ ಡೌನ್‌ಲೋಡ್ ಮಾಡಿದ್ದೀರ?

ಮುಂಬೈ: ಪಿಂಕ್ ವಾಟ್ಸ್​ಆ್ಯಪ್ ಸ್ಕ್ಯಾಮ್‌ ಬಗ್ಗೆ ಬಳಕೆದಾರರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಪಿಂಕ್ ವಾಟ್ಸ್​ಆ್ಯಪ್ ಮತ್ತೆ ಕಾಣಿಸಿಕೊಂಡಿದ್ದು, ಕೆಲವು ದಿನಗಳಿಂದ ಅನೇಕರಿಗೆ ವಾಟ್ಸ್​ಆ್ಯಪ್ ಅಪ್‌ಡೇಟ್‌ ಹೆಸರಿನಲ್ಲಿ ಫಾರ್ವರ್ಡ್‌ ಮೆಸೇಜ್‌ ಹರಿದಾಡುತ್ತಿದೆ.

ಇದು ವಾಟ್ಸ್​ಆ್ಯಪ್​ನ ಹೊಸ ಆವೃತ್ತಿ, ಇದರಲ್ಲಿ ಅನೇಕ ವಿಶೇಷ ಫೀಚರ್​ಗಳಿವೆಕೂಡಲೇ ಡೌನ್​ಲೋಡ್ ಮಾಡಿ” ಎಂಬ ಮೆಸೇಜ್ ಕೂಡ ಇರುತ್ತದೆ. ಇದನ್ನು ನಂಬಿ ಕ್ಲಿಕ್ ಮಾಡಿದಾಗ ಇದರಲಿದ್ದ ಇನ್ಸ್‌ಸ್ಟಾಲೇಷನ್‌ ಲಿಂಕ್‌ ಇದ್ದು, ಅದನ್ನು ಒತ್ತಿದ ಕೂಡಲೇ ವೈರಸ್ ಕಾಣಿಸಿಕೊಂಡು ಹ್ಯಾಕ್ ಆಗಲಿದೆ.

ಬಳಕೆದಾರರ ಒಟಿಪಿ, ಸಂಪರ್ಕ ಸಂಖ್ಯೆ, ಫೋಟೊ, ಬ್ಯಂಕ್‌ ಮಾಹಿತಿ ಸೇರಿದಂತೆ ಮೊಬೈಲ್‌ನಲ್ಲಿರುವ ಎಲ್ಲ ಡೇಟಾ ಹ್ಯಾಕ್‌ ಆಗಲಿದೆ. ಹೀಗಾಗಿ, ಯೂಸರ್‌ ವಾಟ್ಸಾಪ್‌ ಲಿಂಕ್‌ ಸ್ಕ್ಯಾಮ್‌ ಬಗ್ಗೆ ಜಾಗೃತರಾಗಿರಬೇಕೆಂದು ತಜ್ಞರು ಎಚ್ಚರಿಸಿದ್ದಾರೆ.

ನೀವು ಈಗಾಗಲೇ ಪಿಂಕ್ ವಾಟ್ಸ್​ಆ್ಯಪ್ ಡೌನ್‌ಲೋಡ್ ಮಾಡಿದ್ದೀರ?:

ನೀವು ಈಗಾಗಲೇ ಪಿಂಕ್ ವಾಟ್ಸ್​ಆ್ಯಪ್ ಡೌನ್‌ಲೋಡ್ ಮಾಡಿದ್ದರೆ ಅದನ್ನು ತಕ್ಷಣವೇ ಅನ್​ಇನ್​ಸ್ಟಾಲ್ ಮಾಡುವಂತೆ ಮುಂಬೈ ಪೊಲೀಸರು ಬಳಕೆದಾರರನ್ನು ಒತ್ತಾಯಿಸಿದ್ದಾರೆ. ಅಧಿಕೃತ ಆ್ಯಪ್​ ಸ್ಟೋರ್ ಆಗಿರುವ ಗೂಗಲ್​ ಪ್ಲೇ ಸ್ಟೋರ್ ಅಥವಾ ಆ್ಯಪಲ್​ ಆ್ಯಪ್​ಸ್ಟೋರ್​ಗಳಲ್ಲಿ ಇರುವ ಆ್ಯಪ್​ಗಳನ್ನು ಮಾತ್ರ ಡೌನ್​ಲೋಡ್ ಮಾಡಿಕೊಳ್ಳಬೇಕು. ಉಳಿದಂತೆ ಯಾವುದೇ ಲಿಂಕ್ ಮೂಲಕ ಹೋಗಿ ಆ್ಯಪ್​ಗಳನ್ನು ಡೌನ್​​ಲೋಡ್ ಮಾಡಿಕೊಳ್ಳಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪಿಂಕ್ ವಾಟ್ಸ್​ಆ್ಯಪ್ ಹಗರಣ ಎಂದರೇನು?:

ಮುಂಬೈ ಪೊಲೀಸರ ಪ್ರಕಾರ, ”ಪಿಂಕ್ ವಾಟ್ಸ್​ಆ್ಯಪ್​ನಲ್ಲಿ ಹಲವು ರೀತಿಯ ವೈಶಿಷ್ಟ್ಯಗಳಿವೆ ಎಂಬ ಸಂದೇಶಗಳೊಂದಿಗೆ ನಕಲಿ ಲಿಂಕ್​ವೊಂದು ವಾಟ್ಸ್​ಆ್ಯಪ್​ಗೆ ಬರುತ್ತಿದೆ. ಇದು ಹೆಚ್ಚಾಗಿ ಗ್ರೂಪ್​ಗಳಲ್ಲಿ ಬರುತ್ತಿದ್ದು, ಸಹಜವೆಂಬಂತೇ ಜನರು ಕ್ಲಿಕ್​ ಮಾಡಿ ಪೇಚಿಗೆ ಸಿಲುಕುತ್ತಿದ್ದಾರೆ. ಇದು ಫಿಶಿಂಗ್ ಲಿಂಕ್ ಆಗಿದ್ದು, ಬಳಕೆದಾರರು ತಮ್ಮ ಮೊಬೈಲ್ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಕೆಲವೇ ಸೆಕೆಂಡುಗಳಲ್ಲಿ ಮೊಬೈಲ್ ಕೂಡ ಹ್ಯಾಕ್ ಆಗುತ್ತಿದೆ. ಇದರಿಂದಾಗಿ ಎಲ್ಲಾ ಮೊಬೈಲ್ ಡೇಟಾ ಹ್ಯಾಕರ್​ಗಳ ಕೈ ಸೇರುತ್ತಿದೆ. ಇದಕ್ಕೆ ನೀವು ಯಾವುದೇ ರೀತಿಯ OTP ಅನ್ನು ಪಡೆಯುವುದಿಲ್ಲ. ವಂಚಕರು ಈ ಮೂಲಕ ಫೋನ್ ಡೇಟಾವನ್ನು ಸುಲಭವಾಗಿ ಪ್ರವೇಶಿಸಬಹುದು. ನಂತರ ನಿಮ್ಮ ವೈಯಕ್ತಿಕ ವಿಡಿಯೋ, ಫೋಟೋ, ಬ್ಯಾಂಕ್ ಖಾತೆ ಎಲ್ಲ ಮಾಹಿತಿ ದೋಚುತ್ತಾರೆ,” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago