ಮುಂಬೈ: ಪಿಂಕ್ ವಾಟ್ಸ್ಆ್ಯಪ್ ಸ್ಕ್ಯಾಮ್ ಬಗ್ಗೆ ಬಳಕೆದಾರರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ತಿಳಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಪಿಂಕ್ ವಾಟ್ಸ್ಆ್ಯಪ್ ಮತ್ತೆ ಕಾಣಿಸಿಕೊಂಡಿದ್ದು, ಕೆಲವು ದಿನಗಳಿಂದ ಅನೇಕರಿಗೆ ವಾಟ್ಸ್ಆ್ಯಪ್ ಅಪ್ಡೇಟ್ ಹೆಸರಿನಲ್ಲಿ ಫಾರ್ವರ್ಡ್ ಮೆಸೇಜ್ ಹರಿದಾಡುತ್ತಿದೆ.
ಇದು ವಾಟ್ಸ್ಆ್ಯಪ್ನ ಹೊಸ ಆವೃತ್ತಿ, ಇದರಲ್ಲಿ ಅನೇಕ ವಿಶೇಷ ಫೀಚರ್ಗಳಿವೆಕೂಡಲೇ ಡೌನ್ಲೋಡ್ ಮಾಡಿ” ಎಂಬ ಮೆಸೇಜ್ ಕೂಡ ಇರುತ್ತದೆ. ಇದನ್ನು ನಂಬಿ ಕ್ಲಿಕ್ ಮಾಡಿದಾಗ ಇದರಲಿದ್ದ ಇನ್ಸ್ಸ್ಟಾಲೇಷನ್ ಲಿಂಕ್ ಇದ್ದು, ಅದನ್ನು ಒತ್ತಿದ ಕೂಡಲೇ ವೈರಸ್ ಕಾಣಿಸಿಕೊಂಡು ಹ್ಯಾಕ್ ಆಗಲಿದೆ.
ಬಳಕೆದಾರರ ಒಟಿಪಿ, ಸಂಪರ್ಕ ಸಂಖ್ಯೆ, ಫೋಟೊ, ಬ್ಯಂಕ್ ಮಾಹಿತಿ ಸೇರಿದಂತೆ ಮೊಬೈಲ್ನಲ್ಲಿರುವ ಎಲ್ಲ ಡೇಟಾ ಹ್ಯಾಕ್ ಆಗಲಿದೆ. ಹೀಗಾಗಿ, ಯೂಸರ್ ವಾಟ್ಸಾಪ್ ಲಿಂಕ್ ಸ್ಕ್ಯಾಮ್ ಬಗ್ಗೆ ಜಾಗೃತರಾಗಿರಬೇಕೆಂದು ತಜ್ಞರು ಎಚ್ಚರಿಸಿದ್ದಾರೆ.
ನೀವು ಈಗಾಗಲೇ ಪಿಂಕ್ ವಾಟ್ಸ್ಆ್ಯಪ್ ಡೌನ್ಲೋಡ್ ಮಾಡಿದ್ದರೆ ಅದನ್ನು ತಕ್ಷಣವೇ ಅನ್ಇನ್ಸ್ಟಾಲ್ ಮಾಡುವಂತೆ ಮುಂಬೈ ಪೊಲೀಸರು ಬಳಕೆದಾರರನ್ನು ಒತ್ತಾಯಿಸಿದ್ದಾರೆ. ಅಧಿಕೃತ ಆ್ಯಪ್ ಸ್ಟೋರ್ ಆಗಿರುವ ಗೂಗಲ್ ಪ್ಲೇ ಸ್ಟೋರ್ ಅಥವಾ ಆ್ಯಪಲ್ ಆ್ಯಪ್ಸ್ಟೋರ್ಗಳಲ್ಲಿ ಇರುವ ಆ್ಯಪ್ಗಳನ್ನು ಮಾತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಉಳಿದಂತೆ ಯಾವುದೇ ಲಿಂಕ್ ಮೂಲಕ ಹೋಗಿ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಮುಂಬೈ ಪೊಲೀಸರ ಪ್ರಕಾರ, ”ಪಿಂಕ್ ವಾಟ್ಸ್ಆ್ಯಪ್ನಲ್ಲಿ ಹಲವು ರೀತಿಯ ವೈಶಿಷ್ಟ್ಯಗಳಿವೆ ಎಂಬ ಸಂದೇಶಗಳೊಂದಿಗೆ ನಕಲಿ ಲಿಂಕ್ವೊಂದು ವಾಟ್ಸ್ಆ್ಯಪ್ಗೆ ಬರುತ್ತಿದೆ. ಇದು ಹೆಚ್ಚಾಗಿ ಗ್ರೂಪ್ಗಳಲ್ಲಿ ಬರುತ್ತಿದ್ದು, ಸಹಜವೆಂಬಂತೇ ಜನರು ಕ್ಲಿಕ್ ಮಾಡಿ ಪೇಚಿಗೆ ಸಿಲುಕುತ್ತಿದ್ದಾರೆ. ಇದು ಫಿಶಿಂಗ್ ಲಿಂಕ್ ಆಗಿದ್ದು, ಬಳಕೆದಾರರು ತಮ್ಮ ಮೊಬೈಲ್ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಕೆಲವೇ ಸೆಕೆಂಡುಗಳಲ್ಲಿ ಮೊಬೈಲ್ ಕೂಡ ಹ್ಯಾಕ್ ಆಗುತ್ತಿದೆ. ಇದರಿಂದಾಗಿ ಎಲ್ಲಾ ಮೊಬೈಲ್ ಡೇಟಾ ಹ್ಯಾಕರ್ಗಳ ಕೈ ಸೇರುತ್ತಿದೆ. ಇದಕ್ಕೆ ನೀವು ಯಾವುದೇ ರೀತಿಯ OTP ಅನ್ನು ಪಡೆಯುವುದಿಲ್ಲ. ವಂಚಕರು ಈ ಮೂಲಕ ಫೋನ್ ಡೇಟಾವನ್ನು ಸುಲಭವಾಗಿ ಪ್ರವೇಶಿಸಬಹುದು. ನಂತರ ನಿಮ್ಮ ವೈಯಕ್ತಿಕ ವಿಡಿಯೋ, ಫೋಟೋ, ಬ್ಯಾಂಕ್ ಖಾತೆ ಎಲ್ಲ ಮಾಹಿತಿ ದೋಚುತ್ತಾರೆ,” ಎಂದು ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…