ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೇ ಪಿಂಚಣಿ ಬರಲಿದೆ.
ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಪಿಂಚಣಿ ಯೋಜನೆಯಡಿ ವೃದ್ದರು, ಅಂಗವಿಕಲರು, ವಿಚ್ಛೇದಿತ ಮಹಿಳೆಯರು ಸೇರಿ 9 ರೀತಿಯ ಮಾಸಿಕ ಪಿಂಚಣಿ ಯೋಜನೆಗಳು ಚಾಲ್ತಿಯಲ್ಲಿವೆ.
ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?
ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ಉಚಿತವಾಗಿ ದೂರವಾಣಿ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು
ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ `ನವೋದಯ’ ಮೊಬೈಲ್ ಆಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ.
ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು
ಕಡ್ಡಾಯವಾಗಿ ಆಧಾರ್ ಕಾರ್ಡ್
ಬ್ಯಾಂಕ್/ ಅಂಚೆ ಖಾತೆ ವಿವರದ ಪ್ರತಿ
ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ)
ಮೊಬೈಲ್ ಆಯಪ್ ಮೂಲಕ ಭಾವಚಿತ್ರ ಸೆರೆಹಿಡಿಯವುದು
ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ
ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…