Featured

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ – Vishwanews24

ಪಿಂಚಣಿದಾರರಿಗೆ ಸಿಹಿ ಸುದ್ದಿ ; ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ..

ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?

ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಾವ ದಾಖಲೆಗಳನ್ನು ಸಲ್ಲಿಸಬೇಕು..

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೇ ಪಿಂಚಣಿ ಬರಲಿದೆ.

ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಪಿಂಚಣಿ ಯೋಜನೆಯಡಿ ವೃದ್ದರು, ಅಂಗವಿಕಲರು, ವಿಚ್ಛೇದಿತ ಮಹಿಳೆಯರು ಸೇರಿ 9 ರೀತಿಯ ಮಾಸಿಕ ಪಿಂಚಣಿ ಯೋಜನೆಗಳು ಚಾಲ್ತಿಯಲ್ಲಿವೆ.

ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?

ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ಉಚಿತವಾಗಿ ದೂರವಾಣಿ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು

ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ `ನವೋದಯ’ ಮೊಬೈಲ್ ಆಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ.

ಇದನ್ನೂ ಓದಿ: ಉಡುಪಿ: ಗೋವಾ ಸಿಎಂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ : ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ – Vishwanews24

ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು

ಕಡ್ಡಾಯವಾಗಿ ಆಧಾರ್ ಕಾರ್ಡ್

ಬ್ಯಾಂಕ್/ ಅಂಚೆ ಖಾತೆ ವಿವರದ ಪ್ರತಿ

ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ)

ಮೊಬೈಲ್ ಆಯಪ್ ಮೂಲಕ ಭಾವಚಿತ್ರ ಸೆರೆಹಿಡಿಯವುದು

ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ

ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago