ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೇ ಪಿಂಚಣಿ ಬರಲಿದೆ.
ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಪಿಂಚಣಿ ಯೋಜನೆಯಡಿ ವೃದ್ದರು, ಅಂಗವಿಕಲರು, ವಿಚ್ಛೇದಿತ ಮಹಿಳೆಯರು ಸೇರಿ 9 ರೀತಿಯ ಮಾಸಿಕ ಪಿಂಚಣಿ ಯೋಜನೆಗಳು ಚಾಲ್ತಿಯಲ್ಲಿವೆ.
ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?
ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ಉಚಿತವಾಗಿ ದೂರವಾಣಿ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು
ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ `ನವೋದಯ’ ಮೊಬೈಲ್ ಆಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ.
ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು
ಕಡ್ಡಾಯವಾಗಿ ಆಧಾರ್ ಕಾರ್ಡ್
ಬ್ಯಾಂಕ್/ ಅಂಚೆ ಖಾತೆ ವಿವರದ ಪ್ರತಿ
ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ)
ಮೊಬೈಲ್ ಆಯಪ್ ಮೂಲಕ ಭಾವಚಿತ್ರ ಸೆರೆಹಿಡಿಯವುದು
ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ
ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…