ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ – ಕಿಸಾನ್) ಯೋಜನೆಯಡಿ 10 ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯದ ಅಧಿಕೃತ ಹೇಳಿಕೆಯ ಪ್ರಕಾರ, ಇದು ಸರ್ಕಾರದ ನಿರಂತರ ಬದ್ಧತೆ ಮತ್ತು ತಳಮಟ್ಟದ ರೈತರನ್ನು ಸಬಲೀಕರಗೊಳಿಸುವ ಸಂಕಲ್ಪಕ್ಕೆ ಅನುಗುಣವಾಗಿದೆ.ಇದು 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವರ್ಗಾಯಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ :
ಪಿಎಂ – ಕಿಸಾನ್ ಯೋಜನೆಯಡಿಯಲ್ಲಿ, ರೈತ ಕುಟುಂಬಗಳಿಗೆ ಇದುವರೆಗೆ 1.6 ಲಕ್ಷ ಕೋಟಿ ರೂ.ಪಾಯಿಗೂ ಹೆಚ್ಚು ಗೌರವ ಧನ ನೀಡಲಾಗಿದೆ. ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸಲಾಗುತ್ತದೆ, ತಲಾ 2,000 ರೂಪಾಯಿಗಳ ಮೂರು ಸಮಾನ ನಾಲ್ಕು-ಮಾಸಿಕ ಕಂತುಗಳಲ್ಲಿ ಪಾವತಿಸಲಾಗುತ್ತದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.
ಪಿಎಂ-ಕಿಸಾನ್ ಯೋಜನೆಯ ನಿಧಿಯನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಇನ್ನು ಕರ್ನಾಟಕ ಸರ್ಕಾರ ಇದಕ್ಕೆ 4 ಸಾವಿರ ರೂ. ಹೆಚ್ಚುವರಿಯಾಗಿ ನೀಡುತ್ತಾ ಬಂದಿದೆ.
ಇದನ್ನೂ ಓದಿ :
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…