ಎಪ್ರೀಲ್-2022 ರಿಂದ ಜುಲೈ-2022 ರ ವರೆಗಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವಾಯ್ಸಿ ಮಾಡಿಸುವುದು ಕಡ್ಡಾಯವಾಗಿದೆ.
ಇ-ಕೆವಾಯ್ಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್ನ ಪಾರಮರ್ ಕಾರ್ನರ್ನ ಇ-ಕೆವಾಯ್ಸಿ ಅವಕಾಶದಡಿ ರೈತನ (ಫಲಾನುಭವಿ) ಆಧಾರ ಸಂಖ್ಯೆಯನ್ನು ನಮೂದಿಸಿ ನಂತರ ಆಧಾರ ಸಂಖ್ಯೆ ಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ಆಧಾರ ಕಾರ್ಡನೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಗೆ ಓಟಿಪಿ ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ OTP ಯನ್ನು ದಾಖಲಿಸಿ ಸಬ್ಮಿಟ್ ಪಾರ್ ಯುತ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವಾಯ್ಸಿ ಸೆಕ್ಸಸ್ ಸಬ್ಮಿಟೆಡ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಓಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವಾಯ್ಸಿ ಮಾಡಬಹುದಾಗಿದೆ.
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಮೊಬೈಲ್ ಸಂಖ್ಯೆಗೆ ಇ-ಕೆವಾಯ್ಸಿಗಾಗಿ ಕಳುಹಿಸಿದ ಓಟಿಪಿಯು ಸ್ವೀಕೃತವಾಗಿರುವುದಿಲ್ಲವೋ ಅಂತಹ ಫಲಾನುಭವಿಗಳು ಸಮೀಪದ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಯಂತ್ರದ ಮೂಖಾಂತರ ಇ-ಕೆವಾಯ್ಸಿ ಮಾಡಿಸಬಹುದಾಗಿದೆ. ಇಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ ಇ-ಕೆವಾಯ್ಸಿ ಮಾಡಲಾಗುತ್ತದೆ. 2 ನೇ ಪ್ರಕ್ರಿಯೆ (ವಿಧಾನ) ಗಾಗಿ ಮಾತ್ರ ನಾಗರಿಕ ಸೇವಾ ಕೇಂದ್ರದವರಿಗೆ 15 ರೂ.ಗಳನ್ನು ಫಲಾನುಭವಿಯು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…