ಎಪ್ರೀಲ್-2022 ರಿಂದ ಜುಲೈ-2022 ರ ವರೆಗಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವಾಯ್ಸಿ ಮಾಡಿಸುವುದು ಕಡ್ಡಾಯವಾಗಿದೆ.
ಇ-ಕೆವಾಯ್ಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್ನ ಪಾರಮರ್ ಕಾರ್ನರ್ನ ಇ-ಕೆವಾಯ್ಸಿ ಅವಕಾಶದಡಿ ರೈತನ (ಫಲಾನುಭವಿ) ಆಧಾರ ಸಂಖ್ಯೆಯನ್ನು ನಮೂದಿಸಿ ನಂತರ ಆಧಾರ ಸಂಖ್ಯೆ ಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ಆಧಾರ ಕಾರ್ಡನೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಗೆ ಓಟಿಪಿ ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ OTP ಯನ್ನು ದಾಖಲಿಸಿ ಸಬ್ಮಿಟ್ ಪಾರ್ ಯುತ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವಾಯ್ಸಿ ಸೆಕ್ಸಸ್ ಸಬ್ಮಿಟೆಡ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಓಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವಾಯ್ಸಿ ಮಾಡಬಹುದಾಗಿದೆ.
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಮೊಬೈಲ್ ಸಂಖ್ಯೆಗೆ ಇ-ಕೆವಾಯ್ಸಿಗಾಗಿ ಕಳುಹಿಸಿದ ಓಟಿಪಿಯು ಸ್ವೀಕೃತವಾಗಿರುವುದಿಲ್ಲವೋ ಅಂತಹ ಫಲಾನುಭವಿಗಳು ಸಮೀಪದ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಯಂತ್ರದ ಮೂಖಾಂತರ ಇ-ಕೆವಾಯ್ಸಿ ಮಾಡಿಸಬಹುದಾಗಿದೆ. ಇಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ ಇ-ಕೆವಾಯ್ಸಿ ಮಾಡಲಾಗುತ್ತದೆ. 2 ನೇ ಪ್ರಕ್ರಿಯೆ (ವಿಧಾನ) ಗಾಗಿ ಮಾತ್ರ ನಾಗರಿಕ ಸೇವಾ ಕೇಂದ್ರದವರಿಗೆ 15 ರೂ.ಗಳನ್ನು ಫಲಾನುಭವಿಯು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…