ಎಪ್ರೀಲ್-2022 ರಿಂದ ಜುಲೈ-2022 ರ ವರೆಗಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವಾಯ್ಸಿ ಮಾಡಿಸುವುದು ಕಡ್ಡಾಯವಾಗಿದೆ.
ಇ-ಕೆವಾಯ್ಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್ನ ಪಾರಮರ್ ಕಾರ್ನರ್ನ ಇ-ಕೆವಾಯ್ಸಿ ಅವಕಾಶದಡಿ ರೈತನ (ಫಲಾನುಭವಿ) ಆಧಾರ ಸಂಖ್ಯೆಯನ್ನು ನಮೂದಿಸಿ ನಂತರ ಆಧಾರ ಸಂಖ್ಯೆ ಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ಆಧಾರ ಕಾರ್ಡನೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಗೆ ಓಟಿಪಿ ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ OTP ಯನ್ನು ದಾಖಲಿಸಿ ಸಬ್ಮಿಟ್ ಪಾರ್ ಯುತ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವಾಯ್ಸಿ ಸೆಕ್ಸಸ್ ಸಬ್ಮಿಟೆಡ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಓಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವಾಯ್ಸಿ ಮಾಡಬಹುದಾಗಿದೆ.
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಮೊಬೈಲ್ ಸಂಖ್ಯೆಗೆ ಇ-ಕೆವಾಯ್ಸಿಗಾಗಿ ಕಳುಹಿಸಿದ ಓಟಿಪಿಯು ಸ್ವೀಕೃತವಾಗಿರುವುದಿಲ್ಲವೋ ಅಂತಹ ಫಲಾನುಭವಿಗಳು ಸಮೀಪದ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಯಂತ್ರದ ಮೂಖಾಂತರ ಇ-ಕೆವಾಯ್ಸಿ ಮಾಡಿಸಬಹುದಾಗಿದೆ. ಇಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ ಇ-ಕೆವಾಯ್ಸಿ ಮಾಡಲಾಗುತ್ತದೆ. 2 ನೇ ಪ್ರಕ್ರಿಯೆ (ವಿಧಾನ) ಗಾಗಿ ಮಾತ್ರ ನಾಗರಿಕ ಸೇವಾ ಕೇಂದ್ರದವರಿಗೆ 15 ರೂ.ಗಳನ್ನು ಫಲಾನುಭವಿಯು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…