ಎಪ್ರೀಲ್-2022 ರಿಂದ ಜುಲೈ-2022 ರ ವರೆಗಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವಾಯ್ಸಿ ಮಾಡಿಸುವುದು ಕಡ್ಡಾಯವಾಗಿದೆ.
ಇ-ಕೆವಾಯ್ಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್ನ ಪಾರಮರ್ ಕಾರ್ನರ್ನ ಇ-ಕೆವಾಯ್ಸಿ ಅವಕಾಶದಡಿ ರೈತನ (ಫಲಾನುಭವಿ) ಆಧಾರ ಸಂಖ್ಯೆಯನ್ನು ನಮೂದಿಸಿ ನಂತರ ಆಧಾರ ಸಂಖ್ಯೆ ಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ಆಧಾರ ಕಾರ್ಡನೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಗೆ ಓಟಿಪಿ ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ OTP ಯನ್ನು ದಾಖಲಿಸಿ ಸಬ್ಮಿಟ್ ಪಾರ್ ಯುತ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವಾಯ್ಸಿ ಸೆಕ್ಸಸ್ ಸಬ್ಮಿಟೆಡ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಓಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವಾಯ್ಸಿ ಮಾಡಬಹುದಾಗಿದೆ.
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಮೊಬೈಲ್ ಸಂಖ್ಯೆಗೆ ಇ-ಕೆವಾಯ್ಸಿಗಾಗಿ ಕಳುಹಿಸಿದ ಓಟಿಪಿಯು ಸ್ವೀಕೃತವಾಗಿರುವುದಿಲ್ಲವೋ ಅಂತಹ ಫಲಾನುಭವಿಗಳು ಸಮೀಪದ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಯಂತ್ರದ ಮೂಖಾಂತರ ಇ-ಕೆವಾಯ್ಸಿ ಮಾಡಿಸಬಹುದಾಗಿದೆ. ಇಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ ಇ-ಕೆವಾಯ್ಸಿ ಮಾಡಲಾಗುತ್ತದೆ. 2 ನೇ ಪ್ರಕ್ರಿಯೆ (ವಿಧಾನ) ಗಾಗಿ ಮಾತ್ರ ನಾಗರಿಕ ಸೇವಾ ಕೇಂದ್ರದವರಿಗೆ 15 ರೂ.ಗಳನ್ನು ಫಲಾನುಭವಿಯು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…