ಕೇಂದ್ರ ಸರ್ಕಾರದ ಪಿಎಂ ಕುಸುಮ ಯೋಜನೆಯಡಿ ಜಾಲಮುಕ್ತ ಸೌರ ಶಕ್ತಿ ಚಾಲಿತ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ ಲೈನ್ ಮುಖಾಂತರ ಸಲ್ಲಿಸಲು ಒದಗಿಸಬೇಕಾದ ವಿವರಗಳನ್ನು ಕೆ.ಆರ್.ಇ.ಡಿ.ಎಲ್. ಅಧಿಕೃತ ಜಾಲತಾಣ ವೆಬ್ಸೈಟ್ www.kredl.karnataka.gov.in ನಲ್ಲಿ ನೀಡಲಾಗಿದೆ.
ಮಾನದಂಡಗಳು: ರೈತರ ಜಮೀನಿನಲ್ಲಿ ಬಾವಿಯನ್ನು ಕೊರೆಸಿ ಸಿದ್ದವಿರಬೇಕು. ಹೊಸ ಕೃಷಿ ಪಂಪ್ಸೆಟ್ಗಳಿಗೆ ಮಾತ್ರ ಯೋಜನೆಯು ಅನ್ವಯಿಸುತ್ತದೆ (ಹಾಲಿ ವಿದ್ಯುತ್ ಸಂಪರ್ಕವನ್ನು ಹೊಂದಿರುವ ಪಂಪ್ಸೆಟ್ಗಳು ಅರ್ಹವಿರುವುದಿಲ್ಲ). ಅರ್ಜಿದಾರರು ಒಂದು ಸೌರ ಪಂಪ್ಸೆಟ್ಗೆ ಮಾತ್ರ ಅರ್ಜಿ ಸಲ್ಲಿಸುವುದು. ಈಗಾಗಲೇ ಇತರೆ ಅನುದಾನಿತ ಸರ್ಕಾರಿ ಪ್ರಾಯೋಜಿತ ಯೋಜನೆಗಳಡಿ ಸೌರ ಪಂಪ್ಸೆಟ್ ಪಡೆದಿದ್ದರೆ ಅಂತಹ ಅರ್ಜಿದಾರರು ಅರ್ಹರಿರುವುದಿಲ್ಲ. ಅರ್ಜಿದಾರರು ಅವರ ವಂತಿಗೆಯನ್ನು ಡಿ.ಡಿ ಮೂಲಕವೇ ಸಲ್ಲಿಸುವುದು. ಚೆಕ್ ಅಥವಾ ಇತರೆ ಆನ್ಲೈನ್ ಪೇಮೆಂಟ್ ಮೂಲಕ ಅರ್ಜಿದಾರರ ವಂತಿಗೆ ಹಣ ಸ್ವೀಕರಿಸಲಾಗುವುದಿಲ್ಲ. ವಿದ್ಯುತ್ ಸಂಪರ್ಕವಿಲ್ಲದ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸೌರಚಾಲಿತ ಕೃಷಿ ಪಂಪ್ಸೆಟ್ಗಳನ್ನು ಅಳವಡಿಸಲು ಆದ್ಯತೆ ನೀಡಲಾಗುವುದು. ಎಲ್ಲಾ ವರ್ಗದ ಅರ್ಜಿಗಳಲ್ಲಿ ವಿಶೇಷ ಚೇತನರಿಗೆ ಶೇ.5ರಷ್ಟು ಮೀಸಲಾತಿ ಒದಗಿಸಲಾಗುತ್ತಿದೆ. ಸಾಮಾನ್ಯ ಹಾಗೂ ಪ.ಜಾ ಮತ್ತು ಪ.ಪಂ ವರ್ಗದಲ್ಲಿ ಸೂಚಿಸಲಾಗಿರುವ ವಂತಿಗೆ ಮೊತ್ತವನ್ನು ಆಯಾ ವಿಶೇಷಚೇತನ ವರ್ಗದವರ ವಂತಿಗೆಯನ್ನು ಪಾವತಿಸಲಾಗುವುದು. ಕೆ.ಆರ್.ಇ.ಡಿ.ಎಲ್ ಅಧಿಕೃತ ಜಾಲತಾಣ www.kredl.karnataka.gov.in ನಲ್ಲಿ ಮಾತ್ರ ಲಭ್ಯವಾಗುವ ಲಿಂಕ್ ಮೂಲಕವೇ ನೊಂದಾಯಿಸಿ ಕೊಳ್ಳಬಹುದಾಗಿದೆ.
ಅರ್ಜಿದಾರರು ಪಾವತಿಸಬೇಕಾದ ವಂತಿಗೆಗಳು: 3 ಹೆಚ್.ಪಿ ಸಾಮಥ್ರ್ಯದ ಪಂಪ್ಸೆಟ್ಗೆ ಸಾಮಾನ್ಯ ವರ್ಗದವರು ಘಟಕದ ವೆಚ್ಚ ಶೇ.40ರಷ್ಟು 71,422 ರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಘಟಕದ ವೆಚ್ಚ ಶೇ.20ರಷ್ಟು 35,711ರೂ. ಪಾವತಿಸಬೇಕು. 5 ಹೆಚ್ಪಿಗೆ ಸಾಮಾನ್ಯ ವರ್ಗದವರು ರೂ.1,01,056, ಪ.ಜಾತಿ ಮತ್ತು ಪ.ಪಂಗಡದವರು ರೂ.50,528, 7.5 ಹೆಚ್ಪಿಗೆ ಸಾಮಾನ್ಯ ವರ್ಗದವರು ರೂ.1,45,710, ಪ.ಜಾತಿ ಮತ್ತು ಪ.ಪಂಗಡದವರು ರೂ.72856, 10ಹೆಚ್ಪಿಗೆ ಸಾಮಾನ್ಯ ವರ್ಗದವರು ರೂ.2,50,292, ಪ.ಜಾತಿ ಮತ್ತು ಪ.ಪಂಗಡದವರು ರೂ.1,77,438 ಪಾವತಿಸಬೇಕು.
ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.80ರಷ್ಟು ಸಬ್ಸಿಡಿ ಹಾಗೂ ಇತರೆ ವರ್ಗಗಳ ರೈತ ಬಾಂಧವರಿಗೆ ಶೇ.60ರಷ್ಟು ಸಬ್ಸಿಡಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಕೆ.ಆರ್.ಇ.ಡಿ.ಎಲ್. ಪ್ರಾದೇಶಿಕ ಕಚೇರಿ ಅಥವಾ ಮೊ.9986025252, 9742310108 ಗೆ ಸಂಪರ್ಕಿಸಬಹುದು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…